Belagavi NewsBelgaum NewsKarnataka NewsLatestPolitics

*ರಸ್ತೆ ಅಭಿವೃದ್ಧಿ, ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದಲ್ಲಿ ಸುಮಾರು 50 ಲಕ್ಷ ರೂ.ಗಳ ವೆಚ್ಚದಲ್ಲಿ ನೂತನ ರಸ್ತೆ ನಿರ್ಮಾಣ ಹಾಗೂ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಗೆ 2 ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಕಾಮಗಾರಿಗಳಿಗೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಮಂಗಳವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

Home add -Advt

ಗ್ರಾಮೀಣ ಕ್ಷೇತ್ರದ ಅಭಿವೃದ್ದಿ ನಿರಂತರ. ಮೂಲಭೂತ ಸೌಲಭ್ಯಗಳೊಂದಿಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಜನರು ಅವರ ಬೆನ್ನಿಗೆ ನಿಲ್ಲುವ ಮೂಲಕ ಬೆಬಲಿಸಬೇಕು ಎಂದು ಮೃಣಾಲ ಹೆಬ್ಬಾಳಕರ್ ಮನವಿ ಮಾಡಿದರು.

ಈ ವೇಳೆ ಗ್ರಾಮದ ಹಿರಿಯರು, ಕಾಡಾ ಅಧ್ಯಕ್ಷರಾದ ಯುವರಾಜ ಕದಂ, ಮಹೇಶ ಪಾಟೀಲ, ಸಂಜಯ ಪಾಟೀಲ, ಬಾಳು ದೇಸೂರಕರ್ ಮುಂತಾದವರು ಉಪಸ್ಥಿತರಿದ್ದರು.

Related Articles

Back to top button