Karnataka News

*ಸಿಎಂ ಪರಮಾಪ್ತನ ಮನೆ ಮೇಲೂ ಇಡಿ ಅಧಿಕಾರಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಫೀಲ್ಡಿಗಿಳಿದಿರುವ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತನ ಮನೆ ಮೇಲೂ ದಾಳಿ ನಡೆಸಿದ್ದಾರೆ.

Home add -Advt

ಮುಡಾದ 50:50 ನಿವೇಶ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮುಡಾ ಮಾಜಿ ಆಯುಕ್ತರಾದ ಡಾ.ನಟೇಶ್, ದಿನೇಶ್, ಬಿಲ್ಡರ್ ಮಂಜುನಾಥ್ ನಿವಾಸಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಆಪ್ತ ರಾಕೆಶ್ ಪಾಪಣ್ಣ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ.

ಮೈಸೂರಿನ ಹಿನಕಲ್ ಗ್ರಾಮದಲ್ಲಿರುವ ರಾಕೇಶ್ ಪಾಪಣ್ಣ ನಿವಾಸದ ಮೇಲೆ ಐದಕ್ಕೂ ಹೆಚ್ಚು ಇಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಆತಂಕ ಎದುರಾಗಿದೆ.


Related Articles

Back to top button