Latest

*ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ದಿಢೀರ್ ರದ್ದು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ದೆಹಲಿ ಪ್ರವಾಸ ದಿಢೀರ್ ರದ್ದಾಗಿದೆ ಎಂದು ತಿಳಿದುಬಂದಿದೆ.

ಡಿ.ಕೆ.ಶಿವಕುಮಾರ್ ಇಂದು ಸಂಜೆ 7:30ಕ್ಕೆ ದೆಹಲಿಗೆ ತೆರಳಬೇಕಾಗಿತ್ತು. ಇದಕ್ಕಾಗಿ ಏರ್ ಇಂಡಿಯಾ ವಿಮಾನ ಟಿಕೆಟ್ ಕೂಡ ಬುಕ್ ಆಗಿತ್ತು. ಆದರೆ ಕೊನೇ ಕ್ಷಣದಲ್ಲಿ ತಮ್ಮ ದೆಹಲಿ ಭೇಟಿ ಕಾರ್ಯಕ್ರಮ ರದ್ದು ಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆದಿದ್ದು, ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಮಟ್ಟದಲ್ಲಿ ಸರಣಿ ಸಭೆಗಳು ನಡೆಯುತ್ತಿದ್ದು. ಡಿ.ಕೆ.ಶಿವಕುಮಾರ್ ಇಂದು ಸಂಜೆ ದೆಹಲಿಗೆ ತೆರಳಬೇಕಿತ್ತು. ಆದರೆ ಕೊನೇ ಕ್ಷಣದಲ್ಲಿ ದೆಹಲಿ ಪ್ರವಾಸ ರದ್ದಾಗಿದೆ.

https://pragati.taskdun.com/karnataka-vidhanasabha-electionnew-cmoathmay-17thmay18/


Related Articles

Back to top button