Uncategorized

*ಕಾಂಗ್ರೆಸ್ ಗೆ ಅಭೂತಪೂರ್ವ ಗೆಲುವು; ಕರ್ನಾಟಕದ ಮಹಾಜನತೆಗೆ ಧನ್ಯವಾದ ಎನ್ನುತ್ತ ಭಾವುಕರಾಗಿ ಕಣ್ಣೀರು ಸುರಿಸಿದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು ನೀಡಿದ ಅಖಂಡ ಕರ್ನಾಟಕದ ಮಹಾಜನತೆಗೆ ಧನ್ಯವಾದಗಳು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಮ್ಮ ಮೇಲೆ ವಿಶ್ವಾಸವಿಟ್ಟು ರಾಜ್ಯದ ಮಹಾಜನತೆ ಈ ಗೆಲುವು ನೀಡಿದ್ದಾರೆ. ಅವರ ಪಾದಗಳಿಗೆ ನನ್ನ ಸಾಷ್ಟಾಂಗ ನಮಸ್ಕಾರಗಳು. ನಮ್ಮ ಮೇಲೆ ನಂಬಿಕೆಯಿಟ್ಟು ನಿಚ್ಚಳ ಬಹುಮತ ನೀಡಿದ್ದಕ್ಕಾಗಿ ಧನ್ಯವಾದಗಳು ಎಂದು ಕಣ್ಣೀರಾಗಿದ್ದಾರೆ.

ರಾಜ್ಯದ ಜನತೆ ನೀಡಿದ ಈ ಗೆಲುವಿನಿಂದ ಸಂತಸವಾಗಿದೆ. ರಾಜ್ಯ, ಕೇಂದ್ರದ ಎಲ್ಲಾ ನಾಯಕರು, ಕಾರ್ಯಕರ್ತರ ಪರಿಶ್ರಮ ಸಾಮೂಹಿಕ ಪ್ರಯತ್ನದಿಂದ ಗೆಲುವು ಸಾಧ್ಯವಾಗಿದೆ ಎಂದ ಡಿ.ಕೆ.ಶಿವಕುಮಾರ್, ತಿಹಾರ್ ಜೈಲಿನಲ್ಲಿ ತಾವು ಕಳೆದ ಸಂಕಷ್ಟದ ದಿನಗಳನ್ನು ನೆನೆದು ಭಾವುಕರಾದು. ಅಂದು ಸೋನಿಯಾ ಗಾಂಧಿಯವರು ನನ್ನನ್ನು ನೋಡಲು ತಿಹಾರ್ ಜೈಲಿಗೆ ಬಂದಿದ್ದರು. ಆನಂತರದ ದಿನಗಳಲ್ಲಿ ನನ್ನನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ರಾಜ್ಯ ಹಾಗೂ ಕೇಂದ್ರದ ಎಲ್ಲಾ ನಾಯಕರು ಸಹಕಾರ ನೀಡಿದ್ದಾರೆ. ಎಲರಿಗೂ ಧನ್ಯವಾದಗಳು ಎಂದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

https://pragati.taskdun.com/vidhanasabha-electionresultd-k-shivakumarwin/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button