Karnataka NewsLatestPolitics

*ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್*

FIR ಗೆ ಹೈಕೋರ್ಟ್ ತಡೆಯಾಜ್ಞೆ

Home add -Advt

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ವಿರುದ್ಧ ಅವಹೇಳನಕಾರಿ ಪೋಸ್ಟರ್ ಆರೋಪಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ಗೆ ಹೈಕೋರ್ಟ್ ತಡೆ ನೀಡಿದೆ.

ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್​​ನ್ನು ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಎಫ್​​ಐಆರ್​​ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ವಿಚಾರಣೆ ಮಾಡಿದ್ದು, ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್​ಗೂ ಎಕ್ಸ್​​ನ ಪೋಸ್ಟ್​​​ಗೂ ಸಂಬಂಧವಿಲ್ಲವೆಂದು ಡಿ.ಕೆ ಶಿವಕುಮಾರ್​ ಪರ ವಕೀಲ ಹೆಚ್.ವಿ.ಪ್ರವೀಣ್ ಗೌಡ ವಾದಿಸಿದ್ದಾರೆ. ವಿಚಾರಣೆ ಬಳಿಕ ಡಿ.ಕೆ.ಶಿವಕುಮಾರ್ ವಿರುದ್ಧದ ಎಫ್ ಐ ಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಹುಬ್ಬಳ್ಳಿಯಲ್ಲಿ 1992ರಲ್ಲಿ ನಡೆದ ರಾಮ ಜನ್ಮಭೂಮಿ ಕುರಿತ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕ ಶ್ರೀಕಾಂತ ಪೂಜಾರಿಯನ್ನು 31 ವರ್ಷಗಳ ಬಳಿಕ ಅಂದರೆ ರಾಮ ಮಂದಿರ ಉದ್ಘಾಟನೆಗೆ ಸಮಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂಧಿಸಿ ಜೈಲಿಗಟ್ಟಿತ್ತು. ಕಾಂಗ್ರೆಸ್​ ಸರ್ಕಾರ ಉದ್ದೇಶ ಪೂರ್ವಕವಾಗಿ ಬಂಧಿಸಿದ್ದಾರೆ. ಹೀಗಾಗಿ ಇದನ್ನು ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂದು ವಿಭಿನ್ನ ಅಭಿಯಾನ ಮಾಡಿದ್ದರು. ಇದನ್ನು ಡಿ.ಕೆ ಶಿವಕುಮಾರ್​​ ಸೇರಿದಂತೆ ಕಾಂಗ್ರೆಸ್​​ ನಾಯಕರು ತಿರುಚಿ ಪೋಸ್ಟರ್​​ಗಳನ್ನು ಹಾಕಿದ್ದರು ಎಂದು ಆರೋಪಿಸಲಾಗಿತ್ತು.

ಕಾಂಗ್ರೆಸ್​​ ತಿರುಚಿದ ಪೋಸ್ಟರ್​​ಗಳು ಫೋರ್ಜರಿ ಮತ್ತು ಎರಡು ಗುಂಪುಗಳ‌ ನಡುವೆ ದ್ವೇಷ ಮೂಡಿಸಿದ ಆರೋಪ ಹಿನ್ನೆಲೆ ದೂರು ದಾಖಲಾಗಿತ್ತು. ಬಿಜೆಪಿ ಕಾನೂನು ಪ್ರಕೋಷ್ಠ ಮಾಜಿ ಸಂಚಾಲಕ ಯೋಗೇಂದ್ರ ಹೊಡಘಟ್ಟ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ಸಲ್ಲಿಸಿದ್ದರು. ದೂರು ಆಧರಿಸಿ ಹೈಗ್ರೌಂಡ ಪೊಲೀಸರು ಡಿಸಿಎಂ ಡಿ.ಕೆ ಶಿವಕುಮಾರ್​​ ಮತ್ತು ಬಿಆರ್​ ನಾಯ್ಡು ವಿರುದ್ಧ ಎಫ್​ಐಆರ್​​ ದಾಖಲಿಸಿದ್ದರು.


Related Articles

Back to top button