Karnataka NewsLatest

*ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್ ನೀಡಿದೆ.

ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.

Home add -Advt

ರಾಜ್ಯ ಹಾಗೂ ಸಿಬಿಐ ನಡುವಿನ ವಾದವನ್ನು ಸುಪ್ರೀಂಕೋರ್ಟ್ ತೀರ್ಮಾನಿಸಬೇಕು. ಸಿಬಿಐ ಸಲ್ಲಿರುವ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಿ ನಿರ್ಧರಿಸುವುದು ಸರಿಯಲ್ಲ. ಹಾಗಾಗಿ ಸುಪ್ರೀಂ ಕೋರ್ಟ್ ನಲ್ಲಿಯೇ ಅರ್ಜಿ ಸಲ್ಲಿಸಿ ಎಂದು ಹೈಕೋರ್ಟ್ ತಿಳಿಸಿದೆ.


Related Articles

Back to top button