Latest

*ಕುಮಾರಣ್ಣ ಪಕ್ಷ ವಿಸರ್ಜನೆ ಮಾಡುತ್ತಿದ್ದಾರೆ; ಎಲ್ಲರೂ ಬಂದು ಕಾಂಗ್ರೆಸ್ ಸೇರಿಕೊಳ್ಳಿ ಎಂದು ಕರೆ ಕೊಟ್ಟ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರದ ವಿರುದ್ಧ ನಾವೇನು ಅಸ್ತ್ರ ಮಾಡುವ ಅವಶ್ಯಕತೆ ಇಲ್ಲ. ಜನರೇ ಸರ್ಕಾರವನ್ನು ತೆಗೆಯಲು ತೀರ್ಮಾನಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಪ್ರತಿ ದಿನ ಜಾಹೀರಾತುಗಳನ್ನು ನೀಡುತ್ತಿದ್ದಾರೆ. ಕಳೆದ ಬಾರಿ ಬಜೆಟ್ ನಲ್ಲಿ ಘೋಷಿಸಿದ್ದನ್ನು ಜಾರಿಗೆ ತಂದಿದ್ದಾರಾ? ಯಾವುದಾದ್ರೂ ಭರವಸೆ ಈಡೇರಿಸಿದ್ದಾರಾ? ಹಿಂದೆ ನೀಡಿದ ಮಾತಿನಂತೆ ನಡೆದುಕೊಂಡಿದ್ದಾರಾ? ಎಷ್ಟು ಜನರಿಗೆ ಯೋಜನೆಗಳು ತಲುಪಿವೆ? ಎಂದು ಪ್ರಶ್ನಿಸಿದರು.

ಮಾರ್ಕ್ಸ್ ಕಾರ್ಡ್ ಗಳನ್ನು ಮಾರಾಟ ಮಾಡುತ್ತಿದ್ದಾರೆ. 30-50 ಸಾವಿರ, ಲಕ್ಷಕ್ಕೂ ಮಾರ್ಕ್ಸ್ ಕಾರ್ಡ್ ಮಾರಿದ್ದಾರೆ. ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳ ಗತಿಯೇನಾಗಬೇಕು? ಬೆಂಗಳೂರು, ಸಿಕ್ಕಿಂ ವಿಶ್ವ ವಿದ್ಯಾಲಯಗಳಲ್ಲಿ ಏನೆಲ್ಲಾ ನಡೆಯುತ್ತಿದೆ. ಇದೇನು ಸರ್ಕಾರಾನಾ? ಸಿಎಂ ಬೊಮ್ಮಾಯಿ ಹಾಗೂ ತಂಡದವರು ಭ್ರಷ್ಟಾಚಾರದ ಪಿತಾಮಹರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಜೆಡಿಎಸ್ ಬಗ್ಗೆ ಸಾಫ್ಟ್ ಕಾರ್ನರ್ ತೋರುತ್ತಿದ್ದೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ನಾನು ರೀತಿ ನೀತಿ ಮೇಲೆ ಹೋಗುತ್ತೇನೆ. ಯಾರ ಮೇಲೂ ವೈಯಕ್ತಿಕ ವಿಚಾರ ಇಲ್ಲ. ಜೆಡಿಎಸ್ ನವರು ಈಗಾಗಲೇ ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಇನ್ನೂ ಅನೇಕರು ಬರುತ್ತಿದ್ದಾರೆ. ಜೆಡಿಎಸ್ ನವರಿಗೆ ನಾವು ಹೇಳುತ್ತಿದ್ದೇವೆ ನೋಡ್ರಪ್ಪ ಕುಮಾರಣ್ಣ ಪಕ್ಷ ವಿಸರ್ಜನೆ ಮಾಡುತ್ತೇನೆ ಎನ್ನುತ್ತಿದ್ದಾರೆ. ಎಲ್ಲರೂ ಈಗ್ಲೇ ಬಂದು ಕಾಂಗ್ರೆಸ್ ಸೇರಿಕೊಳ್ಳಿ ಎಂದು ಹೇಳಿದ್ದೇನೆ ಎಂದರು.

*ಅಮಿತ್ ಶಾ ಆಗಮನ; ಕಿತ್ತೂರು ಕರ್ನಾಟಕದಲ್ಲಿ ಮಿಂಚಿನ ಸಂಚಲನ ಎಂದ ಸಿಎಂ*

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button