
ಪ್ರಗತಿವಾಹಿನಿ ಸುದ್ದಿ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳಿಗೆ ಕೋರ್ಟ್ ಶಿಕ್ಷೆ ಪ್ರಕಟಿಸಿದೆ.
ಅರ್ಜಿ ವಿಚಾರಣೆ ನಡೆಸಿದ ೪೨ನೇ ಎಸಿಎಂಎಂ ನ್ಯಾಯಾಲಯ, ಚೆಕ್ ಬೌನ್ಸ್ ಕೇಸ್ ನಲ್ಲಿ 1 ಕೋಟಿ 25 ಲಕ್ಷ ದಂಡ ಪಾವತಿಸುವಂತೆ ಮಾಜಿ ಸಚಿವ ಬಿ.ನಾಗೇಂದ್ರ, ಬಿ.ಸಿ.ಇನ್ಫ್ರಾಸ್ಟ್ರಕ್ಚರ್, ಅನಿಲ್ ರಾಜಶೇಖರ್ ಚಂಡೂರು ಭಾಸ್ಕರ್ ಗೆ ಸೂಚಿಸಿದೆ. ದಂಡ ಪಾವತಿಸದಿದ್ದರೆ 1 ವರ್ಷ ಸೆರೆವಾಸ ಅನುಭವಿಸಲು ಆದೇಶ ಹೊರಡಿಸಿದೆ.
ವಿಎಸ್ ಎಲ್ ಸ್ಟೀಲ್ಸ್ ಲಿಮಿಟೆಡ್ ಮಾಜಿ ಸಚಿವ ನಾಗೇಂದ್ರ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿತ್ತು.