*ಸಚಿವ ಸಂಪುಟ ವಿಸ್ತರಣೆ ಕುರಿತು ಎಐಸಿಸಿ ಅಧ್ಯಕ್ಷ ಖರ್ಗೆ ಜೊತೆ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸಮಾಲೋಚನೆ*

ಪ್ರಗತಿವಾಹಿನಿ ಸುದ್ದಿ:ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಕೂಡ ಉಪಸ್ಥಿತರಿದ್ದರು. ರಾಜ್ಯದ ರಾಜಕೀಯ ಬೆಳವಣಿಗೆಗಳು, ಸಚಿವ ಸಂಪುಟ ವಿಸ್ತರಣೆ, ಪ್ರಾದೇಶಿಕ ಮತ್ತು ಸಾಮಾಜಿಕ ಸಮತೋಲನ ಸೇರಿದಂತೆ ಹಲವು ಮಹತ್ವದ … Continue reading *ಸಚಿವ ಸಂಪುಟ ವಿಸ್ತರಣೆ ಕುರಿತು ಎಐಸಿಸಿ ಅಧ್ಯಕ್ಷ ಖರ್ಗೆ ಜೊತೆ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸಮಾಲೋಚನೆ*