Kannada NewsKarnataka NewsLatestPolitics

*ಮೆಟ್ರೋ ದರ ಏರಿಕೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: “ಮೆಟ್ರೋ ದರ ಬಗ್ಗೆ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಇದರ ಮುಖ್ಯಸ್ಥರು. ಮೆಟ್ರೋ ದರ ಏರಿಕೆ ವಿಚಾರವಾಗಿ ನಮ್ಮ ಅಭಿಪ್ರಾಯವನ್ನು ಕೇಳಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.

ಮಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

Home add -Advt

“ನಾನು ಬೆಂಗಳೂರಿಗೆ ಮರಳಿದ ಬಳಿಕ ಈ ಬಗ್ಗೆ ಚರ್ಚೆ ಮಾಡುವೆ. ಜನರಿಗೆ ತೊಂದರೆ ನೀಡಲು ನಮಗೆ ಇಷ್ಟವಿಲ್ಲ. ಆರ್ಥಿಕ ಸ್ಥಿತಿಗತಿ ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದರು.

ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು

ನೀವು ಸಿಎಂ ಆಗಬೇಕು ಎಂಬ ಕನಸು ಜನರಿಗಿದೆ ಎಂದು ಕೇಳಿದಾಗ, “ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ನಿಮಗೂ (ಮಾಧ್ಯಮ) ಇದೆ. ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು” ಎಂದು ತಿಳಿಸಿದರು.

ದಲಿತ ಸಂಘಟನೆಗಳು ಪರಮೇಶ್ವರ್ ಅವರು ಸಿಎಂ ಆಗಬೇಕು ಎಂದು ಆಸೆ ಪಟ್ಟಿರುವ ಬಗ್ಗೆ ಕೇಳಿದಾಗ, “ಅವರವರ ಅಭಿಮಾನಿಗಳು ಆಸೆ ಪಡುತ್ತಾರೆ. ಅದನ್ನು ನಾನು ಬೇಡ ಎಂದು ಹೇಳಲು ಆಗುವುದಿಲ್ಲ” ಎಂದರು.

ಸಮಯವೇ ಉತ್ತರ ನೀಡುತ್ತದೆ

ರಾಜ್ಯ ಬಜೆಟ್ ಬಳಿಕ ಅಧಿಕಾರ ಹಂಚಿಕೆ ಆಗುವುದೇ ಎಂದು ಕೇಳಿದಾಗ, “ಸಮಯವೇ ಉತ್ತರ ನೀಡಲಿದೆ” ಎಂದರು.

Related Articles

Back to top button