LatestUncategorized

*ನನಗೆ ಸಂಪೂರ್ಣ ಸಂತೋಷವಿಲ್ಲ; ಬೇಸರ ವ್ಯಕ್ತಪಡಿಸಿದ ಸಂಸದ ಡಿ.ಕೆ.ಸುರೇಶ್*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಸಂಸದ ಡಿ.ಕೆ.ಸುರೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಡಿ.ಕೆ.ಸುರೇಶ್, ನನಗೆ ಸಂಪೂರ್ಣ ಸಂತೋಷವಿಲ್ಲ. ಆದರೆ ಕರ್ನಾಟಕದ ರಾಜ್ಯದ ಹಿತದೃಷ್ಟಿಯಿಂದ ಡಿಕೆಶಿ ಒಪ್ಪಿದ್ದಾರೆ ಎಂದು ಹೇಳಿದರು.

Home add -Advt

ನಾವು ನೀಡಿರುವ ಭರವಸೆಯನ್ನು ಮೊದಲು ಈಡೇರಿಸಬೇಕಾಗಿದೆ. ಅದಕ್ಕಾಗಿ ಡಿ.ಕೆ.ಶಿವಕುಮಾರ್ ಒಪ್ಪಿಕೊಂಡಿದ್ದಾರೆ. ಮುಂದೆ ಏನಾಗುತ್ತದೆ ಎಂಬುದನ್ನು ಕಾದು ನೋಡೋಣ ಎಂದು ಹೇಳಿದರು.

https://pragati.taskdun.com/d-k-shivakumarreactiondcm-postsiddaramaiahcm/


Related Articles

Back to top button