Kannada NewsKarnataka NewsLatestPolitics

*ದೇಶದ ಜನರು ಬದಲಾವಣೆ ಬಯಸಿದ್ದಾರೆ; ರಾಜ್ಯದಲ್ಲಿ 10 ಪಕ್ಷಗಳು ಒಟ್ಟಿಗೆ ಸೇರಿ ಚುನಾವಣೆಯನ್ನು ಎದುರಿಸುತ್ತೇವೆ; ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಕೆಪಿಸಿಸಿ ಕಚೇರಿಯಲ್ಲಿ ʼಇಂಡಿಯಾʼ ಮಿತ್ರಪಕ್ಷಗಳ ಜಂಟಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರು ನಗರದಲ್ಲಿ ಇಂಡಿಯಾ ಜನ್ಮತಾಳಿತು. ಈ ದೇಶದಲ್ಲಿ ಬದಲಾವಣೆ ಅನಿವಾರ್ಯ ಎಂದು ಮನಗಂಡು ಒಕ್ಕೂಟವನ್ನು ರಚನೆ ಮಾಡಲಾಯಿತು. ಕರ್ನಾಟಕದಲ್ಲಿ ಈ ಬದಲಾವಣೆ ಉಂಟಾಯಿತು. ನಂತರ ಅನೇಕ ಕಡೆ ಚುನಾವಣೆ ನಡೆಯಿತು. ಸೋಲು, ಗೆಲುವು ಎರಡನ್ನು ಕಂಡಿದ್ದೇವೆ ಎಂದರು.

2019 ರ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಮತು ದಳ ಒಟ್ಟಾಗಿ ಚುನಾವಣೆ ಎದುರಿಸಿದ್ದೆವು. ತುಮಕೂರಿನಲ್ಲಿ ಸಿಪಿಐ ಪಕ್ಷವು 17 ಸಾವಿರ ಮತಗಳಿಸಿತ್ತು. ದೇವೇಗೌಡರು 12 ಸಾವಿರ ಮತಗಳಿಂದ ಸೋಲು ಕಂಡಿದ್ದರು. ಈ ರೀತಿಯ ವಿಂಗಡಣೆ ಆಗಬಾರದು ಎನ್ನುವುದು ನಮ್ಮೆಲ್ಲರ ಉದ್ದೇಶವಾಗಿದೆ. ನಾವೆಲ್ಲಾ ಒಟ್ಟಾಗಿ ಎನ್‌ ಡಿಎ ಸೋಲಿಸಬೇಕು ಎಂಬುದು ನಮ್ಮ ಏಕೈಕ ಉದ್ದೇಶ. ಈ ವಿಚಾರವಾಗಿ ನಾವು ಒಟ್ಟಾಗಿ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿದರು.

2019 ರ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಮತು ದಳ ಒಟ್ಟಾಗಿ ಚುನಾವಣೆ ಎದುರಿಸಿದ್ದೆವು. ತುಮಕೂರಿನಲ್ಲಿ ಸಿಪಿಐ ಪಕ್ಷವು 17 ಸಾವಿರ ಮತಗಳಿಸಿತ್ತು. ದೇವೇಗೌಡರು 12 ಸಾವಿರ ಮತಗಳಿಂದ ಸೋಲು ಕಂಡಿದ್ದರು. ಈ ರೀತಿಯ ವಿಂಗಡಣೆ ಆಗಬಾರದು ಎನ್ನುವುದು ನಮ್ಮೆಲ್ಲರ ಉದ್ದೇಶವಾಗಿದೆ. ನಾವೆಲ್ಲಾ ಒಟ್ಟಾಗಿ ಎನ್‌ ಡಿಎ ಸೋಲಿಸಬೇಕು ಎಂಬುದು ನಮ್ಮ ಏಕೈಕ ಉದ್ದೇಶ. ಈ ವಿಚಾರವಾಗಿ ನಾವು ಒಟ್ಟಾಗಿ ಚರ್ಚೆ ನಡೆಸುತ್ತಿದ್ದೇವೆ.

ಕೇಂದ್ರ ಸರ್ಕಾರ ವಿಪಕ್ಷಗಳ ನಾಯಕರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದನ್ನು ನಾವೆಲ್ಲಾ ಬಲವಾಗಿ ಖಂಡಿಸುತ್ತೇವೆ. ಬೂತ್ ಮಟ್ಟದಿಂದ ನಾವೆಲ್ಲಾ ಒಟ್ಟಿಗೆ ಕೆಲಸ ಮಾಡುತ್ತೇವೆ. ಜೊತೆಗೂಡುವುದು ಆರಂಭ, ಜೊತೆಗೂಡಿ ಚರ್ಚೆ ನಡೆಸಿದರೆ ಪ್ರಗತಿ, ಜೊತೆಗೂಡಿ ಕೆಲಸ ಮಾಡಿದರೆ ಯಶಸ್ಸು ಆದ ಕಾರಣ ಚಿಕ್ಕ, ದೊಡ್ಡ ಪಕ್ಷ ಎನ್ನದೇ ಜೊತೆಗೂಡಿ ಕೆಲಸ ಮಾಡುತ್ತಿದ್ದೇವೆ. One man with courage is a majority ಎನ್ನುವ ಮಾತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆ. ಅಧಿಕಾರ ಇಲ್ಲದೇ ಇರಬಹುದು ಆದರೆ ಮಿತ್ರ ಪಕ್ಷಗಳ ಸಿದ್ಧಾಂತ, ಬದ್ದತೆ ಮುಖ್ಯವಾದುದು. ನಾವೆಲ್ಲ ಈ ಹಿಂದೆ ಅನೇಕ ಚುನಾವಣೆಗಳನ್ನು ಬೇರೆ, ಬೇರೆಯಾಗಿ ಎದುರಿಸಿದ್ದೇವೆ. ಆದರೆ ಇಂದು ದೇಶದ ಉಳಿವಿಗೆ ಒಂದಾಗಿದ್ದೇವೆ.

ಕೋಮುವಾದಿ ಸರ್ವಾಧಿಕಾರದ ವಿರುದ್ಧ ಪ್ರಜಾಪ್ರಭುತ್ವ ಇದು ನಮ್ಮ ಪ್ರಮುಖ ಘೋಷಣೆ. ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಲು ನಾವು ಹೋರಾಟ ಮಾಡುತ್ತೇವೆ. ಚುನಾವಣಾ ಬಾಂಡ್ ವಿಚಾರದಲ್ಲಿ ಬಿಜೆಪಿ ಲೆಕ್ಕವೇ ಕೊಡುತ್ತಿಲ್ಲ. ಐಟಿ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ನೋಟಿಸ್ ನೀಡಿದೆ. ಕಮ್ಯನಿಷ್ಟ್ ಪಕ್ಷಕ್ಕೆ 11 ಕೋಟಿ ವಿಚಾರವಾಗಿ ನೋಟಿಸ್ ನೀಡಿದ್ದಾರೆ. ನಾನು ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ ಎಂದು ಹೇಳುತ್ತಿದ್ದ ಮೋದಿಯವರು ಇದಕ್ಕೆ ಉತ್ತರ ಕೊಡಬೇಕು. ಅಮಿತ್ ಷಾ ಅವರು ರಾಜ್ಯಕ್ಕೆ ಬಂದಿದ್ದಾರೆ. ಬರ ಪರಿಹಾರದ ವಿಚಾರವಾಗಿ ಏನನ್ನೂ ಮಾತನಾಡುತ್ತಿಲ್ಲ. ಕರ್ನಾಟಕ ಜನರ ಬಗ್ಗೆ ಅವರಿಗೆ ವಿಶ್ವಾಸ ಇಲ್ಲವೇ ಇದಕ್ಕೆಲ್ಲಾ ಅಮಿತ್ ಷಾ ಉತ್ತರ ನೀಡಬೇಕಾಗಿದೆ.

ನಮ್ಮ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಪಕ್ಷ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ. ಆದರೆ ಇತರೇ ಸಮೀಕ್ಷೆಗಳ ಪ್ರಕಾರ 28 ಸ್ಥಾನಗಳನ್ನೂ ನಾವು ಗೆಲ್ಲುತ್ತೇವೆ. ಎಲ್ಲಾ ಮಿತ್ರ ಪಕ್ಷಗಳನ್ನು ಸೇರಿಸಿ ಸಮನ್ವಯ ಸಮಿತಿ ರಚಿಸಲಾಗುವುದು. ಚುನಾವಣೆ ಮುಗಿಯುವ ತನಕ ಮೂರು ದಿನಗಳು ಅಥವಾ ವಾರಕ್ಕೊಮ್ಮೆ ಸಭೆ ಸೇರಲಾಗುವುದು. ಎಲ್ಲಾ ಮಿತ್ರ ಪಕ್ಷಗಳು ಪ್ರತಿ ಕ್ಷೇತ್ರದಲ್ಲೂ ನಮಗೆ ಬೆಂಬಲ ನೀಡುತ್ತೇವೆ ಎಂದು ಲಿಖಿತವಾಗಿ ಬರೆದುಕೊಟ್ಟಿವೆ. ಈ ಸಹಕಾರಕ್ಕೆ ಮುಖ್ಯಮಂತ್ರಿಗಳು ಹಾಗೂ ಎಲ್ಲರ ಪರವಾಗಿ ಅಭಿನಂದನೆ ತಿಳಿಸುತ್ತೇನೆ.

ಪ್ರಶ್ನೋತ್ತರ

ಒಂದೊಂದು ಮತವೂ ಮುಖ್ಯ
ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಲಾಭವಾಗುತ್ತದೆಯೇ ಎಂದಾಗ “28 ಕ್ಷೇತ್ರದಲ್ಲೂ ಅನುಕೂಲವಾಗಲಿದೆ. ರಾಜಕಾರಣದಲ್ಲಿ 49 ಎಂದರೆ ಸೊನ್ನೆ, 51 ಎಂದರೆ ನೂರು ಎಂದರ್ಥ. ಧ್ರುವನಾರಾಯಣ್ ಅವರು 1 ಮತದಿಂದ ಗೆದ್ದಿದ್ದರು. ದಿನೇಶ್ ಗುಂಡೂರಾವ್ ಅವರು ಅಲ್ಪ ಅಂತರದಲ್ಲೇ ಗೆದ್ದರು, ಸೌಮ್ಯರೆಡ್ಡಿ 16 ಮತಗಳಿಂದ ಸೋತರು. ಆದ ಕಾರಣ ಒಂದೊಂದು ಮತವೂ ಮುಖ್ಯ” ಎಂದು ಹೇಳಿದರು

ಡಿ.ಕೆ.ಸುರೇಶ್ ನೆನಪಿಸಿಕೊಂಡಿದ್ದಕ್ಕೆ ಮೋದಿ ಅವರಿಗೆ ಅಭಿನಂದನೆಗಳು
ಉತ್ತರಖಂಡ ಚುನಾವಣಾ ಪ್ರಚಾರದ ವೇಳೆ ಡಿ.ಕೆ.ಸುರೇಶ್ ಅವರ ದೇಶವಿಭಜನೆ ಹೇಳಿಕೆ ಬಗ್ಗೆ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ ಎಂದು ಕೇಳಿದಾಗ “ದೇಶ ವಿಭಜನೆ ಬಗ್ಗೆ ಯಾರೂ ಮಾತನಾಡಿಲ್ಲ. ತೆರಿಗೆ ಅನ್ಯಾಯವಾದರೆ ಈ ಬಗ್ಗೆ ಜನ ಆಲೋಚನೆ ಮಾಡುವಂತಹ ಪರಿಸ್ಥಿತಿ ಬರಬಹುದು ಎಂದು ಸುರೇಶ್ ಅವರು ಹೇಳಿದ್ದಾರೆ. ಡಿ.ಕೆ.ಸುರೇಶ್ ನೆನಪಿಸಿಕೊಂಡಿದ್ದಕ್ಕೆ ಮೋದಿ ಅವರಿಗೆ ಅಭಿನಂದನೆಗಳು” ಎಂದು ಪ್ರಧಾನಿ ಅವರಿಗೆ ಕುಟುಕಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button