Belagavi NewsBelgaum NewsKannada NewsKarnataka NewsLatestPolitics

*ರಾಜಕೀಯಕ್ಕಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಬಿಜೆಪಿ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜಕೀಯಕ್ಕಾಗಿ ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ವಿಚಾರವಾಗಿ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುವರ್ಣ ಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್,ನಿನ್ನೆಯ ಕಲಾಪದಲ್ಲಿ ಬಿಜೆಪಿ ನಾಯಕರು ಪೃಥ್ವಿ ಸಿಂಗ್ ಅವರ ಮೇಲಿನ ಹಲ್ಲೆ ವಿಚಾರವಾಗಿ ಗದ್ದಲ ಸೃಷ್ಟಿಸಿದ ವಿಚಾರವಾಗಿ ಪ್ರತಿಕ್ರಿಯಿಸಿ, ಅದೆಲ್ಲವೂ ಸುಳ್ಳು ಆರೋಪ. ಯಾವುದೇ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆಯಾಗಿಲ್ಲ. ಇದೆಲ್ಲವೂ ಸೃಷ್ಟಿ ಮಾಡಲಾಗಿರುವ ಕಥೆ. ರಾಜಕೀಯ ಉದ್ದೇಶಕ್ಕೆ ಈ ವಿಚಾರವನ್ನು ಎತ್ತುತ್ತಿದ್ದಾರೆ ಎಂದರು.

ತೆಲಂಗಾಣ ಚುನಾವಣೆಯ ಜವಾಬ್ದಾರಿಯ ನಿರ್ವಹಣೆ ಬಗ್ಗೆ ಕೇಳಿದಾಗ, “ತೆಲಂಗಾಣದ ಜವಾಬ್ದಾರಿಯನ್ನು ನಿಭಾಯಿಸಿದ್ದು ನಾನಲ್ಲ. ನನ್ನ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ನಿಭಾಯಿಸಿದರು ಎಂದು ತಿಳಿಸಿದರು.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button