LatestUncategorized

*ಒಂದೇ ಮಾತು ಹೇಳಿ ಹೊರಟ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿಧಾಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿದ್ದು, ನೂತನ ಸಿಎಂ ಆಯ್ಕೆ ಇಂದೇ ಫೈನಲ್ ಆಗುವ ಸಾಧ್ಯತೆ ಇದೆ.

ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ ನಡೆಅಲಿದ್ದು, ಸಭೆಯಲ್ಲಿ ಭಾಗಿಯಾಗಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖರ್ಗೆ ನಿವಾಸಕ್ಕೆ ತೆರಳಿದ್ದಾರೆ.

ದೆಹಲಿ ಏರ್ ಪೋರ್ಟ್ ಗೆ ಆಗಮಿಸಿದ ಡಿ.ಕೆ.ಶಿವಕುಮಾರ್, ಸುದ್ದಿಗಾರರ ಯಾವುದೇ ಪ್ರಶ್ನೆಗೆ ಉತ್ತರ ನೀಡಿಲ್ಲ. ನಾನು ನನ್ನ ದೇವಸ್ಥಾನಕ್ಕೆ ಬಂದಿದ್ದೇನೆ ಎಂದು ಒಂದೇ ಮಾತು ಹೇಳಿ ಕಾರು ಹತ್ತಿ ಖರ್ಗೆ ನಿವಾಸದತ್ತ ಹೊರಟಿದ್ದಾರೆ.

https://pragati.taskdun.com/k-n-rajannareactionsiddaramaiahcm/


Home add -Advt

Related Articles

Back to top button