Latest

*ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ ಎಂದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನೂತನ ಮುಖ್ಯಮಂತ್ರಿ ಆಯ್ಕೆ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಅಧಿಕಾರ ಹಂಚಿಕೆ ಸೂತ್ರ ಪಾಲನೆಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಅದರಂತೆ ಆರಂಭದ 30 ತಿಂಗಳು ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ನಂತರದ 30 ತಿಂಗಳು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯನ್ನಾಗಿ ಮಾಡಲು ತೀರ್ಮಾನಿಸಲಾಗಿದೆ.

ಹೈಕಮಾಂಡ್ ನಿರ್ಧಾರಕ್ಕೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ ಎಂದಿದ್ದೇನೆ. ಹೈಕಮಾಂಡ್ ಫಾರ್ಮುಲಾಗೆ ನನ್ನ ಸಹಮತವಿದೆ ಎಂದು ಹೇಳಿದ್ದಾರೆ.

30-30 ತಿಂಗಳ ಅಧಿಕಾರ ಹಂಚಿಕೆ ಸೂತ್ರಕ್ಕೆ ನಾನು ಒಪ್ಪಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಅಧಿಕಾರ ಹಂಚಿಕೆ ಸೂತ್ರ ಪಾಲನೆಗೆ ಸಮ್ಮತಿಸಿದ್ದೇನೆ. ರಾಜ್ಯದ ಜನರ ಸೇವೆ ಮಾಡಲು ಕಟಿಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನು ಮೇ 20ರಂದು ಕಂಠೀರವ ಸ್ಟೇಡಿಯಂ ನಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

Home add -Advt
https://pragati.taskdun.com/mangalorebusfire-accident/


Related Articles

Back to top button