Latest

*ಯಾವ ತನಿಖೆ ಬೇಕಾದ್ರೂ ಎದುರಿಸಲು ಸಿದ್ಧ; ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಕೋಲಾರ: ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್,ರಮೇಶ್ ಜಾರಕಿಹೊಳಿ ದೆಹಲಿ ಪ್ರವಾಸದ ಬಗ್ಗೆ ಪ್ರತಿಕ್ರಿಯಿಸಿ, ಅವರು ಏನು ಬೇಕಾದ್ರೂ ಮಾಡಲಿ ಯಾವುದಕ್ಕೂ ಹೆದರಲ್ಲ ಎಂದು ಹೇಳಿದ್ದಾರೆ.

ನನ್ನ ಮೇಲೆ ಯಾವ ಪ್ರಯೋಗ ಬೇಕಾದ್ರೂ ಮಾಡಲಿ, ಸಿಬಿಐಯನ್ನೂ ಎದುರಿಸಲು ಸಿದ್ಧನಾಗಿದ್ದೇನೆ. ಯಾವ ತನಿಖೆ ಬೇಕಾದ್ರೂ ಎದುರಿಸಲು ಸಿದ್ಧ. ಯಾವುದಕ್ಕೂ ಭಯಪಡುವ ಪ್ರಶ್ನೆಯೇ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

*ಅಮಿತ್ ಶಾ ಭೇಟಿಯಾದ್ರಾ ರಮೇಶ್ ಜಾರಕಿಹೊಳಿ?*

Home add -Advt

https://pragati.taskdun.com/ramesh-jarakiholiamit-shahmeetcd-case/

Related Articles

Back to top button