LatestUncategorized

*ಶೃಂಗೇರಿಯಲ್ಲಿ ಚಂಡಿಕಾಯಾಗ ನೆರವೇರಿಸಿದ ಡಿ.ಕೆ.ಶಿವಕುಮಾರ್ ದಂಪತಿ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚುನಾವಣೆ ಪ್ರಚಾರದ ಭರಾಟೆ ನಡುವೆಯೇ ದೇವರ ಮೊರೆ ಹೋಗಿದ್ದಾರೆ. ಶೃಂಗೇರಿಯಲ್ಲಿ ಶಾರದಾಂಬೆ ಸನ್ನಿಧಾನದಲ್ಲಿ ಚಂಡಿಕಾ ಹೋಮ ನೆರವೇರಿಸಿದ್ದಾರೆ.

ನಿನ್ನೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್ ದಂಪತಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಇಂದು ಶೃಂಗೇರಿ ಶಾರದಾಂಬೆ ದರ್ಶನ ಪಡೆದಿರುವ ಡಿ.ಕೆ.ಶಿವಕುಮಾರ್ ದಂಪತಿ ಶೃಂಗೇರಿಯಲ್ಲಿ ಚಂಡಿಕಾ ಹೋಮ ನೆರವೇರಿಸಿದ್ದಾರೆ.

Home add -Advt

ಉಡುಪಿಯ ಜ್ಯೋತಿಷಿ ಸಿ.ಎಸ್.ದ್ವಾರಕಾನಾಥ್ ಸಲಹೆಯಂತೆ 15ಕ್ಕೂ ಹೆಚ್ಚು ಪುರೋಹಿತರ ನೇತೃತ್ವದಲ್ಲಿ ಇಂದು ಶಾರದಾಂಬೆ ಸನ್ನಿಧಿಯಲ್ಲಿ ಚಂಡಿಕಾ ಯಾಗ ಮಾಡಿದ್ದಾರೆ.

https://pragati.taskdun.com/cm-basavaraj-bommaividhanasabha-electioncamaign/

Related Articles

Back to top button