Belagavi NewsBelgaum NewsKarnataka NewsLatestPolitics

*ಸುವರ್ಣ ವಿಧಾನಸೌಧದಲ್ಲಿ ವಿಶೇಷ ಪೂಜೆ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿ, ರಾಜ್ಯದ ಅಭಿವೃದ್ಧಿ, ಜನರ ಸುಖ-ಸಮೃದ್ಧಿ ಹಾಗೂ ಉತ್ತಮ ಆಡಳಿತಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದರು.


ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ಭಾಗವಹಿಸಿ ರಾಜ್ಯದ ಸರ್ವತೋಮುಖ ಅಭಿವೃದ್ಧಿ, ರೈತರ ನೆಮ್ಮದಿ, ಉತ್ತಮ ಮಳೆ, ಜನಕಲ್ಯಾಣ ಮತ್ತು ಆಡಳಿತ ಯಶಸ್ವಿಯಾಗಲೆಂದು ಪ್ರಾರ್ಥಿಸಿದರು.


ಪೂಜೆಯ ಬಳಿಕ ಮುಖ್ಯಮಂತ್ರಿ ಅವರು ಸುವರ್ಣ ವಿಧಾನಸೌಧದ ವಿವಿಧ ವಿಭಾಗಗಳನ್ನು ವೀಕ್ಷಿಸಿ, ಬಳಿಕ ಬೆಳಗಾವಿ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅಭಿವೃದ್ಧಿ ಕಾಮಗಾರಿಗಳು, ಆಡಳಿತ ವ್ಯವಸ್ಥೆ ಹಾಗೂ ಜನಪರ ಯೋಜನೆಗಳ ಅನುಷ್ಠಾನದ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

Home add -Advt


ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವರಾದ ಎಂ.ಬಿ. ಪಾಟೀಲ, ಸತೀಶ ಜಾರಕಿಹೊಳಿ, ಯು.ಟಿ. ಖಾದರ್, ಈಶ್ವರ ಖಂಡ್ರೆ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಸಚಿವರು ಉಪಸ್ಥಿತರಿದ್ದರು.


ಅದೇ ವೇಳೆ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ವಿವಿಧ ಜಿಲ್ಲೆಗಳ ಶಾಸಕರು, ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕ ಪ್ರತಿನಿಧಿಗಳು ವಿಶೇಷ ಪೂಜೆಯಲ್ಲಿ ಭಾಗವಹಿಸಿ ರಾಜ್ಯದ ಅಭಿವೃದ್ಧಿಗಾಗಿ ಪ್ರಾರ್ಥಿಸಿದರು.

Related Articles

Back to top button