Kannada NewsKarnataka NewsLatestPolitics
*ಎಐಸಿಸಿ ಅಧ್ಯಕ್ಷರಿಗೆ ಹುಟ್ಟುಹಬ್ಬದ ಶುಭ ಕೋರಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹುಟ್ಟುಹಬ್ಬದ ಶುಭ ಕೋರಿದರು.
ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್, ಖರ್ಗೆ ಅವರಿಗೆ ಹೂಗುಚ್ಛ ನೀಡಿ ಜನ್ಮದಿನದ ಶುಭಾಷಯ ತಿಳಿಸಿದರು.



