Latest

ಕೇಂದ್ರ ಸಚಿವ ಸದಾನಂದಗೌಡ ಝಿರೋ ಟ್ರಾಫಿಕ್ ನಲ್ಲಿ ಬೆಂಗಳೂರು ಆಸ್ಪತ್ರೆಗೆ ಶಿಫ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅನಾರೋಗ್ಯದಿಂದ ಚಿತ್ರದುರ್ಗದ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಶುಗರ್ ಲೆವಲ್ ಲೋ ಆದ ಪರಿಣಾಮ ಸದಾನಂದಗೌಡ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಹೆಬ್ಬಾಳದಲ್ಲಿರುವ ಆಸ್ಟರ್ ಆಸ್ಪತ್ರೆಗೆ ಶಿಫ್ಟ ಮಾಡಲಾಗಿದೆ.

ಆಂಬುಲೆನ್ಸ್ ನಲ್ಲಿ ಝಿರೋ ಟ್ರಾಫಿಕ್ ಮೂಲಕವಾಗಿ ಚಿತ್ರದುರ್ಗದಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದ್ದು, ಸಧ್ಯ ಕೇಂದ್ರ ಸಚಿವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

 

Home add -Advt

Related Articles

Back to top button