*ಭಾರಿ ಮಳೆ ಮುನ್ಸೂಚನೆ; 5 ತಾಲೂಕು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಲರ್ಟ್ ಘೋಷಣೆ ಮಾಡಲಾಗಿದ್ದು, 5 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಂಟ್ವಾಳ, ಮೂಡಬಿದರೆ, ಮಂಗಳೂರು, ಉಳ್ಳಾಲ, ಮುಲ್ಕಿ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆರಜೆ ಘೋಷಿಸಲಾಗಿದೆ. ಉಳಿದೆಡೆ ರಜೆ ಘೋಷಿಸುವ ನಿರ್ಧಾರವನ್ನು ತಾಲೂಕು ತಹಶಿಲ್ದಾರ್ ಗೆ ಜವಾಬ್ದಾರಿ ವಹಿಸಲಾಗಿದೆ. *ವಿದ್ವಾನ್ ಡಿ.ಎಸ್.ಪ್ರಕಾಶ ಭಟ್ಟರಿಗೆ ವ್ಯಾಸಜ್ಯೋತಿ ಪ್ರಶಸ್ತಿ*