Latest

ಅನಾಥಾಶ್ರಮದಲ್ಲಿ ಕೊರೊನಾ ಸ್ಫೋಟ; 210 ಜನರಲ್ಲಿ ಸೋಂಕು

ಪ್ರಗತಿವಾಹಿನಿ ಸುದ್ದಿ; ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಅನಾಥಾಶ್ರಮವೊಂದರಲ್ಲಿ ಬರೋಬ್ಬರಿ 210 ಮಂದಿಯಲ್ಲಿ ಕೊರೊನಾ ಸೋಂಕು ಹರಡಿರುವ ಘಟನೆ ಬೆಳಕಿಗೆ ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಗ್ರಾಮದ ಸಿಯೋನ್ ಅನಾಥಾಶ್ರದ 270 ಜನರ ಪೈಕಿ 210 ಜನರಿಗೆ ಕೊರೊನಾ ಸೋಂಕು ತಗುಲಿದೆ. ಸೋಂಕಿತರನ್ನು ಧರ್ಮಸ್ಥಳದ ರಜತಾದ್ರಿ ಕೋವಿಡ್ ಕೇರ್ ಸೆಂಟರ್ ಗೆ ಶಿಫ್ಟ್ ಮಾಡಲಾಗಿದೆ.
ಸಿ.ಪಿ.ಯೋಗೇಶ್ವರ್ ಗೆ ಎದುರಾಯ್ತು ಸಂಕಷ್ಟ

Home add -Advt

Related Articles

Back to top button