Kannada NewsLatestNational

*ಭಾರಿ ಮಳೆಗೆ ಭೂಕುಸಿತ: 14 ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಾತ್ರವಲ್ಲ ದೇದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಿಂದಾಗಿ ಅಲ್ಲೋಲಕಲ್ಲೋ ಸೃಷ್ಟಿಯಾಗಿದೆ. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ನಲ್ಲಿ ಧಾರಾಕಾರ ಮಳೆಯಿಂದಾಗಿ ಭೂಕುಸಿತವುಂಟಾಗಿದ್ದು, 14 ಜನರು ಸಾವನ್ನಪ್ಪಿದ್ದಾರೆ.

Home add -Advt

ಭೂಕುಸಿತದಿಂದಾಗಿ ಹಿಮಾಲಯದ ಸಿಕ್ಕಿಂ ರಾಜ್ಯದ ಜೊತೆಗಿನ ಸಂಪರ್ಕ ಕಡಿತಗೊಂಡಿದೆ. ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ನಿನ್ನೆ ತಡರಾತ್ರಿಯಿಂದ ಸುರಿದ ಭಾರಿ ಮಳೆಯಿಂದ ಈ ದುರಂತ ಸಂಭವಿಸಿದೆ. ಉತ್ತರ ಬಂಗಾಳದ ಡಾರ್ಜಿಲಿಂಗ್ ನಲ್ಲಿ ಭೂಕುಸಿತ ಸಂಭವಿಸಿದೆ. ಮೀರಕ್, ಸುಖಿಯಾ ಪೋಖಾರಿಯಾದಂತಹ ಪ್ರದೇಶಗಳಲ್ಲಿ ಅನಾಹುತ ಸಂಭವಿಸಿದೆ.

ಹಲವು ಪ್ರವಾಸಿಗರು ವಿಪತ್ತಿನಲ್ಲಿ ಸಿಲಿಕಿಕೊಂಡಿರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Related Articles

Back to top button