Film & Entertainment

*ಪೊಲೀಸರ ಎದುರು ನಟ ದರ್ಶನ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಚಾಲೇಂಗ್ ಸ್ಟಾರ್ ದರ್ಶನ್ ಸೇರಿದಂತೆ 10 ಆರೋಪಿಗಳನ್ನು ಬೆಂಗಳೂರು ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ. ಬಂಧನದ ಬಳಿಕ ನಟ ದರ್ಶನ್ ನಾನು ಬೆದರಿಸಲು ಹೇಳಿದ್ದೆ ಕೊಲೆ ಮಾಡಲು ಹೇಳಿಲ್ಲ ಎಂದು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.

ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ವಿಚಾರವಾಗಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಕಿಡ್ನ್ಯಾಪ್ ಮಾಡಿ ಹತ್ಯೆ ಮಡಿರುವ ಆರೋಪದಲ್ಲಿ ನಟ ದರ್ಶನ್ ಸೇರಿ 10 ಜನರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಪೊಲೀಸರ ಪ್ರಾಥಮಿಕ ವಿಚಾರಣೆ ವೇಳೆ ನಟ ದರ್ಶನ್ ನಾನು ರೇಣುಕಾಸ್ವಾಮಿ ಕೊಲೆ ಮಾಡುವಂತೆ ಹೇಳಿಲ್ಲ, ಬೆದರಿಸುವಂತೆ ಮಾತ್ರ ಹೇಳಿದ್ದೆ ಎಂದು ಪೊಲೀಸರ ಮುಂದೆ ತಿಳಿಸಿದ್ದಾರೆ ಎನ್ನಲಾಗಿದೆ.

ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ನನ್ನು ಮೈಸೂರಿನ ರ್‍ಯಾಡಿಸನ್ ಬ್ಲು ಹೋಟೆಲ್ ನಲ್ಲಿ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

Related Articles

Back to top button