Film & Entertainment

*ರೇಣುಕಾಸ್ವಾಮಿ ಹತ್ಯೆ ಬಳಿಕ ಪವಿತ್ರಾ ಗೌಡ ಮೇಲೂ ಹಲ್ಲೆ ನಡೆಸಿದ್ದ ನಟ ದರ್ಶನ್?*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 12 ಜನರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ರೇಣುಕಾಸ್ವಾಮಿ ನಟ ದರ್ಶನ್ ಅಭಿಮಾನಿ ಕೂಡ ಆಗಿದ್ದ ಎನ್ನಲಾಗಿದೆ. ಪವಿತ್ರಾ ಗೌಡಾಳಿಂದಾಗಿಯೇ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ದಾಂಪತ್ಯದಲ್ಲಿ ಬಿರುಕುಂಟಾಗುತ್ತಿದೆ. ಇಬ್ಬರ ನಡುವೆ ಪವಿತ್ರಾ ಬಂದಿದ್ದೇ ನೆಚ್ಚಿನ ನಟನ ಬಾಳಲ್ಲಿ ಮನಸ್ತಾಪಕ್ಕೆ ಕಾರಣ ಎಂದು ತೀವ್ರವಾಗಿ ಸಿಟ್ಟಾಗಿದ್ದ ರೇಣುಕಾಸ್ವಾಮಿ, ಪವಿತ್ರಾ ಗೌಡಳನ್ನು ಬೈದು ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ಎನ್ನಲಾಗಿದೆ.

ಇದೇ ಕಾರಣಕ್ಕೆ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆತಂದು ಬೆಂಗಳೂರಿನ ಆರ್.ಆರ್.ನಗರ ಬಳಿಯ ಶೆಡ್ ಒಂದರಲ್ಲಿ ಕೂಡಿಟ್ಟು ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳು ಬಾಯ್ಬಿಟ್ಟ ಪ್ರಕಾರ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸುವ ಸಂದರ್ಭದಲ್ಲಿ ಶೆಡ್ ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಕೂಡ ಇದ್ದರು ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಬಳಿಕ ನಟ ದರ್ಶನ್ ಪವಿತ್ರಾ ಗೌಡ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನಿಂದಾಗಿಯೇ ಹೀಗೆಲ್ಲ ಆಯಿತು ಎಂದು ದರ್ಶನ್ ಪವಿತ್ರಾ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಗೊಂಡಿದ್ದ ಪವಿತ್ರಾ ಆರ್.ಆರ್.ನಗರ ಆಸ್ಪತ್ರೆಗೆ ದಾಖಲಾಗಿ ನಿನ್ನೆಯಷ್ಟೇ ಡಿಸ್ಚಾರ್ಜ್ ಆಗಿದ್ದಾರೆ ಎಂದು ವರದಿಯಾಗಿದೆ. ಒಟ್ಟಾರೆ ಪ್ರಕರಣದ ಬಗ್ಗೆ ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರಬರಬೇಕಿದೆ.


Related Articles

Back to top button