Film & EntertainmentKannada NewsKarnataka NewsLatest

*ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಬಿಗ್ ಶಾಕ್: ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ಮೂಲಕ ನಟ ದರ್ಶ ಹಾಗೂ ಗ್ಯಾಂಗ್ ಮತ್ತೆ ಜೈಲು ಸೇರುವುದು ಖಚಿತವಾಗಿದೆ.

Home add -Advt

ಪ್ರಕರಣ ಸಂಬಂಧ ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ದೋಷವಿದೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳ ಜಾಮೀನು ರದ್ದುಗೊಳಿಸಿಸಿ ಸುಪ್ರೀಂ ಕೋರ್ಟ್ ನೀಡಿದೆ.

ಅಲ್ಲ ಆರೋಪಿ ಎಷ್ಟೇ ದೊಡ್ಡವನಾಗಿದ್ದರೂ ಕಾನೂನಿಗಿಂತ ದೊಡ್ಡವನಲ್ಲ. ಕೊಲೆ ಆರೋಪಿಗಳಿಗೆ ಜೈಲಿನಲ್ಲಿ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲಾಧಿಕಾರಿಗಳ ವಿರುದ್ಧವೂ ಕ್ರಮವಾಗಬೇಕು. ಈ ತೀರ್ಪು ಎಲ್ಲಾ ಜೈಲುಗಳಿಗೂ ಒಂದು ಲ್ಯಾಂಡ್ ಮಾರ್ಕ್ ಎಂದು ಸುಪ್ರೀಂ ಕೋರ್ಟ್ ಖಡಕ್ ಸಂದೇಶ ರವಾನಿಸಿದೆ.

Related Articles

Back to top button