Latest

ಈ ಬಾರಿಯ ದಸರಾಕ್ಕೆ ಸಿಎಂ ವಿಶೇಷ ಸಂದೇಶ

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಬರದ ಸಿದ್ಧತೆ ನಡೆದಿದ್ದು, ಆಹ್ವಾನ ಪತ್ರಿಕೆ ಕೂಡ ಸಿದ್ಧವಾಗಿದೆ. ಆಹ್ವಾನ ಪತ್ರಿಕೆಯಲ್ಲಿ ರಾಜ್ಯದ ಜನತೆಗೆ ಸಿಎಂ ಮಹತ್ವದ ಸಂದೇಶ ರವಾನಿಸಿದ್ದಾರೆ.

ಕೊರೊನಾ ಹಿನ್ನಲೆಯಲ್ಲಿ ಸರಳವಾಗಿ ದಸರಾ ಆಚರಿಸೋಣ. ಜೀವನದೊಂದಿಗೆ ಜೀವವೂ ಮುಖ್ಯವೆಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರದ ಈ ನಿರ್ಧಾರವನ್ನು ತಾವೆಲ್ಲರೂ ಸ್ವಾಗತಿಸುತ್ತೀರಿ ಎಂದು ಸದಾಶಯವಿದೆ. ಮುಂದಿನ ಬಾರಿ ವಿಜೃಂಭಣೆಯಿಂದ ದಸರಾ ಆಚರಿಸೋಣ ಎಂದು ಸಿಎಂ ತಿಳಿಸಿದ್ದಾರೆ.

ಮೈಸೂರು ದಸರಾ ಅಕ್ಟೋಬರ್ 7ರಂದು ಉದ್ಘಾಟನೆಯಾಗಲಿದೆ. ಚಾಮುಂಡಿಬೆಟ್ಟದಲ್ಲಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ದಸರಾ ಉದ್ಘಾಟನೆ ಮಾಡಲಿದ್ದಾರೆ. ಅಕ್ಟೋಬರ್ 15 ರಂದು ಜಂಬೂಸವಾರಿ ನಡೆಯಲಿದ್ದು, ಸಂಜೆ 4:36ರಿದ 5:30ರ ಶುಭ ಮೀನ ಲಗ್ನದಲ್ಲಿ ಪೂಜೆ ನಡೆಯಲಿದೆ.
ದೊಡ್ಡ ಸಂಚಲನಕ್ಕೆ ಕಾರಣವಾದ ಕಿತ್ತೂರು ಶಾಸಕರಿಗೆ ಪ್ರಭಾಕರ ಕೋರೆ ನೀಡಿದ ಸಲಹೆ

Home add -Advt

Related Articles

Back to top button