Kannada NewsKarnataka NewsLatest

*ಇಂದಿನಿಂದ ಚಿಕ್ಕಮಗಳೂರಿನ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಇಂದಿನಿಂದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆಡೆಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿ ಕ್ರಿಸ್ ಮಸ್ ರಜೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪ್ರವಾಸಕ್ಕೆ ತೆರಳುವವರು ಕೊಂಚ ಈ ಬಗ್ಗೆ ಗಮನಹರಿಸಬೇಕು. ಇಂದಿನಿಂದ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿಯ ದತ್ತಪೀಠದಲ್ಲಿ ದತ್ತ ಜಯಂತಿ ಆರಂಭವಾಗಿದ್ದು, ಸಾವಿರಾರು ದತ್ತಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸುತ್ತಿದ್ದಾರೆ.

Home add -Advt

ಈ ಹಿನ್ನೆಲೆಯಲ್ಲಿ ಮುನ್ನೆಚ್ರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದ್ದು, ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಇಂದಿನಿಂದ ಡಿಸೆಂಬರ್ 27ರ ವರೆಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರ ಸೇರಿದಂತೆ ಚಿಕ್ಕಮಗಳೂರಿನ ಪ್ರವಾಸಿ ತಾಣಗಳು ಬಂದ್ ಆಗಲಿವೆ.

ದತ್ತಪೀಠದಲ್ಲಿ ಡಿಸೆಂಬರ್ 24, 25 ಹಾಗೂ 26ರಂದು ದತ್ತ ಜಯಂತಿ ಅಂಗವಾಗಿ ಅಂದು ವಿಶೇಷ ಪೂಜೆ, ಹೋಮ-ಹವನಗಳು ನಡೆಯಲಿವೆ. ಡಿ.26ರಂದು ದತ್ತಪೀಠಕ್ಕೆ 20,000ಕ್ಕೂ ಹೆಚ್ಚು ದತ್ತಮಾಲಾಧಾರಿಗಳು ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದ್ದು, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಇನ್ನು ದತ್ತಪೀಠದ ಅರ್ಚಕರು ಸೇರಿದಂತೆ ಐವರಿಗೆ ಅಂಗರಕ್ಷಕರನ್ನು ಪೊಲೀಸ್ ಇಲಖೆ ನೇಮಕ ಮಾಡಿದೆ.


Related Articles

Back to top button