Karnataka News

*ಗಣೇಶ ಮೂರ್ತಿ ವಿಸರ್ಜೆನೆ ವೇಳೆ ಕಲ್ಲು ತೂರಾಟ: 11 ಆರೋಪಿಗಳು ನ್ಯಾಯಾಂಗ ಬಂಧನಕ್ಕೆ*

ಪ್ರಗತಿವಾಹಿನಿ ಸುದ್ದಿ: ನಾಗಮಂಗಲದ ಬಳಿಕ ದಾವಣಗೆರೆಯಲ್ಲಿಯೂ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ ನಡೆದು ಕಲ್ಲು ತೂರಾಟ ಪ್ರಕರಣ ನಡೆದಿದ್ದು, ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ದಾವಣಗೆರೆಯ ಬೇತೂರು ರಸ್ತೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಿನ್ನೆ ರಾತ್ರಿ ಕಲ್ಲು ತೂರಾಟ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪ್ರಕರಣ ಸಂಬಂಧ ಪೊಲೀಸರು 11 ಆರೋಪಿಗಳನ್ನು ಬಂಧಿಸಿ, ಇಂದು ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

Home add -Advt

ದಾವಣಗೆರೆ ಜಿಲ್ಲಾ ಸತ್ರ ನ್ಯಾಯಾಲಯದ ಕೋರ್ಟ್ ಗೆ ಆರೋಪಿಗಳನ್ನು ಹಾಜರುಪಡಿಸಲಾಗಿದ್ದು, ಈ ವೇಳೆ ನ್ಯಾಯಾಧೀಶರು ಎಲ್ಲಾ 11 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.


Related Articles

Back to top button