
ಪ್ರಗತಿವಾಹಿನಿ ಸುದ್ದಿ: ಕಳ್ಳತನ ಆರೋಪದಲ್ಲಿ ದಾವಣಗೆರೆಯಲ್ಲಿ ಬಾಲಕನನ್ನು ಮರಕ್ಕೆ ಕಟ್ಟಿಹಾಕಿ ಮರ್ಮಾಂಗಕ್ಕೆ ಕೆಂಪಿರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರ ವಿರುದ್ಧ ಎಫ್ ಆರ್ ದಾಖಲಾಗಿದೆ.
ದಾವಣಗೆರೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಹತ್ತು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ದಾವಣಗೆರೆಯ ಅಸ್ತಾಪನಹಳ್ಳಿಯಲ್ಲಿ ಹಕ್ಕಿಪಿಕ್ಕಿ ಜನಾಂಗದ ಬಾಲಕನೊಬ್ಬನ ಮೇಲೆ ಕಳ್ಳತನ ಆರೋಪ ಹಿನ್ನೆಲೆಯಲ್ಲಿ ಅದೇ ಜನಾಂಗದ ಯುವಕರ ಗುಂಪು ಬಾಲಕನನ್ನು ಮನಬಂದಂತೆ ಥಳಿಸಿ, ಮರಕ್ಕೆ ಕಟ್ಟಿಹಾಕಿ ಮರ್ಮಾಂಗಕ್ಕೆ ಕೆಂಪಿರುವೆ ಬಿಟ್ಟು ಚಿತ್ರಹಿಂಸೆ ನೀಡಿತ್ತು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತು. ಘಟನೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಹಲ್ಲೆ ಪ್ರಕರಣ ಸಂಅಬ್ಂಧ ಹತ್ತು ಜನರ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸಿದ್ದಾರೆ.