Kannada NewsKarnataka NewsLatest

*ಬೆಂಕಿ ಅವಘಡ; ಸುಟ್ಟು ಕರಕಲಾದ ಸಂಪೂರ್ಣ ಮನೆ*

ಪ್ರಗತಿವಾಹಿನಿ ಸುದ್ದಿ: ದೇವರ ಮುಂದೆ ಹಚ್ಚಿದ್ದ ದೀಪದಿಂದ ಬೆಂಕಿ ಹೊತ್ತಿಕೊಂದ ಪರಿಣಾಮ ಇಡೀ ಮನೆಗೆ ಬೆಂಕಿ ವ್ಯಾಪಿಸಿ ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದ ಮನೆಯಲ್ಲಿ ಈ ಘಟನೆ ನಡೆದಿದೆ. ನಿನ್ನೆ ಸಂಜೆ ದೇವರ ಮನೆಯಲ್ಲಿ ದೀಪ ಹಚ್ಚಿ ಮನೆಯವರೆಲ್ಲ ಕಾರ್ಯಕ್ರಮದ ನಿಮಿತ್ತ ಮನೆಗೆ ಬಾಗಿಲು ಹಾಕಿ ಹೊರ ಹೋಗಿದ್ದರು. ಮನೆಗೆ ವಾಪಾಸ್ ಆಗುವಷ್ಟರಲ್ಲಿ ಇಡೀ ಮನೆ ಬೆಂಕಿಯಲ್ಲಿ ಹೊತ್ತಿ ಉರಿದಿದೆ.

Related Articles

ಮನೆಯಲ್ಲಿದ್ದ ವಸ್ತುಗಳು, ಹಣ, ಒಡವೆ, ಧಾನ್ಯಗಳು ಬೆಂಕಿಗಾಹುತಿಯಾಗಿವೆ. ಬಡಪ್ಪ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಜಗಳೂರು ತಾಲೂಕು ದಂಡಾಧಿಕಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬೆಂಕಿ ಅವಗಢದಿಂದ ಆದ ನಷ್ಟಕ್ಕೆ ಪರಿಹಾರ ನೀಡುವಂತೆ ಬಡಪ್ಪ ಮನವಿ ಮಾಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button