
ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೇಡಿ ಸಿಂಗಂ ಉಮಾ ಪ್ರಶಾಂತ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಖಡಕ್ ಐಪಿಎಸ್ ಅಧಿಕಾರಿ ಎಂದೇ ಹೆಸರಾಗಿದ್ದ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ದಾವಣಗೆರೆ ನೂತನ ಎಸ್ ಪಿಯಾಗಿ ಹೆಚ್.ಟಿ.ಶೇಖರ್ ಅವರನ್ನು ನೇಮಕ ಮಾಡಲಾಗಿದೆ.



