Latest

ಹಂಪಿ ಕಂಬ ಉರುಳಿಸಿದವರ ವಿರುದ್ಧ ಕಠಿಣ ಕ್ರಮ; ಸಚಿವ ಡಿಕೆಶಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಹಂಪಿಯಲ್ಲಿ ಐತಿಹಾಸಿಕ ಕೆತ್ತನೆಯುಕ್ತ ಕಲ್ಲು ಕಂಬಗಳನ್ನು ಉರುಳಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬಳ್ಳಾರಿ ಜಿಲ್ಲೆ ಉಸ್ತುವಾರಿಯನ್ನೂ ಹೊತ್ತಿರುವ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕೆಲವು ಕಿಡಿಗೇಡಿಗಳು ಕಂಬಗಳನ್ನು ಉರುಳಿಸಿ ವಿಕೃತಿ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿರುವುದನ್ನು ಗಮನಿಸಿದ್ದೇನೆ. ಆ ಕಿಡಿಗೇಡಿಗಳನ್ನು ತಕ್ಷಣ ಪತ್ತೆ ಹಚ್ಚಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಮ್ಮ ಐತಿಹಾಸಿಕ ಕುರುಹುಗಳನ್ನು ನಾಶ ಮಾಡುವುದನ್ನಾಗಲಿ, ವಿರೂಪಗೊಳಿಸುವುದನ್ನಾಗಲಿ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

Home add -Advt

Related Articles

Back to top button