National

*ಮಾನನಷ್ಟ ಮೊಕದ್ದಮೆ ಪ್ರಕರಣ: ಶಿವಸೇನೆ ಸಂಸದನಿಗೆ ಜೈಲು ಶಿಕ್ಷೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ಸಂಸದ ಸಂಜಯ್ ರಾವತ್ ಗೆ ಮುಂಬೈ ನ್ಯಾಯಾಲಯ 15 ದಿನಗಳ ಕಾಲ ಜೈಲುಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸಂಜಯ್ ರಾವತ್ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ.

Home add -Advt

ಮುಂಬೈನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500ರಡಿ ಸಂಸದ ಸಂಜಯ್ ರಾವತ್ ದೋಷಿ ಎಂದು ಘೋಷಿಸಿದ್ದು, 15 ದಿನಗಳ ಕಾಲ ಜೈಲು ಶಿಕ್ಷೆ ಹಾಗೂ 25,000 ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.


Related Articles

Back to top button