Kannada NewsLatestNational

*ಕಾರು ಸ್ಫೋಟ ಪ್ರಕರಣ: ಭಯೋತ್ಪಾದಕ ದಾಳಿಗೆ ಸಂಚು ಅಡಿ FIR ದಾಖಲು*

ಹೈ ಅಲರ್ಟ್ ಘೋಷಣೆ

Home add -Advt


ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟ ಪ್ರಕರಣದಲ್ಲಿ 9 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆ ಹಿಂದೆ ಉಗ್ರರ ಕೈವಾಡ ಶಂಕೆ ವ್ಯಕ್ತವಾಗಿದೆ. ಈ ನಡುವೆ ಪ್ರಕರಣ ಸಂಬಂಧ ದೆಹಲಿ ಪೊಲೀಸರು ಯುಎಪಿಎ ಅಡಿ ಎಫ್ ಐ ಆರ್ ದಾಖಲಿಸಿದ್ದಾರೆ.

ದೆಹಲಿಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಚಟುವಟಿಕೆ ಕಾಯ್ದೆ ಹಾಗೂ ಸ್ಫೋಟಕ ಕಾಯ್ದೆಯಡಿ ಎಫ್ ಐ ಆರ್ ದಾಖಲಿಸಿದ್ದಾರೆ. ಯುಎಪಿಎ ಸೆಕ್ಷನ್ 16 ಹಾಗೂ 18 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸೆಕ್ಷನ್ ಗಳು ಭಯೋತ್ಪಾದಕ ದಾಳಿಗೆ ಸಂಚು ಹಾಗೂ ಅವುಗಳಿಗೆ ಶಿಕ್ಷೆ ಸಂಬಂಧಿಸಿದ್ದಾಗಿದೆ.

ಇನ್ನು ದೆಹಲಿಯ ಏರ್ ಪೋರ್ಟ್, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣ, ಸೂಕ್ಷ್ಮ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.


Related Articles

Back to top button