![LaxmiTai 5](https://pragativahini.com/wp-content/uploads/2024/06/Laxmi-Tai-add-5.jpg)
![GIT add 2024-1](https://pragativahini.com/wp-content/uploads/2024/04/GIT-add-2024-1.jpg)
ಪ್ರಗತಿವಾಹಿನಿ ಸುದ್ದಿ: ದೆಹಲಿಯ ಕರ್ನಾಟಕ ಭವನದಲ್ಲಿ ಕೆಲಸ ಮಾಡುತ್ತಿದ್ದ ವಿಜಯನಗರ ಮೂಲದ ನೌಕರ ಊರಿಗೆ ಬಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮಾರುತಿ (35) ಆತ್ಮಹತ್ಯೆಗೆ ಶರಣಾದ ನೌಕರ. ಮಾರುತಿ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಎಂ.ಬಿ.ಅಯ್ಯನಹಳ್ಳಿ ಗ್ರಾಮದವರು.
![Emergency Service](https://pragativahini.com/wp-content/uploads/2023/06/IMG-20221115-WA0034.jpg)
ಮೂರು ದಿನಗಳ ಹಿಂದೆ ದೆಹಲಿಯಿಂದ ಗ್ರಾಮಕ್ಕೆ ಆಗಮಿಸಿದ್ದ ಮಾರುತಿ, ಪತ್ನಿ ಹಾಗೂ ಮಕ್ಕಳನ್ನು ತವರು ಮನೆಗೆ ಬಿಟ್ಟು ತಾನು ತಂದೆ- ತಾಯಿ ನೋಡಿಕೊಂಡು ಬರುತ್ತೇನೆ ಎಂದು ಸ್ವಗ್ರಾಮಕ್ಕೆ ಬಂದಿದ್ದ. ಮನೆಗೆ ಬಂದ ಮಾರುತಿ ಕಾನಾಹೊಸಳ್ಳಿ ಹೊರವಲಯದಲ್ಲಿ ಹುಣಸೆಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ರೀತಿಯಲ್ಲಿ ಪತ್ತೆಯಾಗಿದ್ದಾನೆ.
ಪತ್ನಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಕಾನಾಹೊಸಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.