Karnataka NewsLatestNational
*BREAKING: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಸ್ಫೋಟ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ ಕಾರ್ ಬಾಂಬ್ ಸ್ಫೋಟದಲ್ಲಿ 13 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಬೆನ್ನಲ್ಲೇ ದೆಹಲಿಯಲ್ಲಿ ಮತ್ತೊಂದು ಭಾರಿ ಸ್ಫೋಟ ಸಂಭವಿಸಿದೆ.
ದೆಹಲಿಯ ಮಹಿಪಾಲ್ಪುರದ ರ್ಯಾಡಿಸನ್ ಹೋಟೆಲ್ ಬಳಿ ಇಂದು ಬೆಳಿಗ್ಗೆ ಭಾರಿ ಸ್ಫೋಟ ಸಂಭವಿಸಿದೆ.ಬೆಳಿಗ್ಗೆ 9:18ರ ಸುಮಾರಿಗೆ ಈ ಘಟನೆ ನಡೆದಿದೆ. ಸ್ಫೋಟದ ವೇಳೆ ಬೆಂಕಿ ಹೊತ್ತಿಕೊಂಡಿದ್ದು, ಘಟನೆಗೆ ನಿಖರ ಕಾರಣ್ ಅತಿಳಿದುಬಂದಿಲ್ಲ. ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.
ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಲ್ಲ. ಘಟನಾ ಸ್ಥಳದಲ್ಲಿ ಪೊಲೀಸರು ತನಿಖೆ ನಡೆಸಿದ್ದಾರೆ.



