Latest
ಮತ್ತೊಂದು ಬೆಂಕಿ ದುರಂತ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಹುಅಂತಸ್ತಿನ ಕಟ್ಟಡದಲ್ಲಿ ಅಗ್ನಿಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ದೆಹಲಿಯ ಹಳೇ ಸೀಮಾಪುರಿ ಏರಿಯಾದಲ್ಲಿ ನಡೆದಿದೆ.
ಮೂರು ಅಂತಸ್ತಿನ ಕಟ್ಟಡದಲ್ಲಿ ಮುಂಜಾನೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ನಾಲ್ವರು ದಟ್ಟಹೊಗೆಯಿಂದಾಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಹೌರಿ ಲಾಲ್, ರೀನಾ, ಅಶು ಮತ್ತು ರಾಧಿಕಾ ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಸುಮಾರು 4:7ಕ್ಕೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಸಸಿಗಳನ್ನು ನೆಟ್ಟು ಇತರರಿಗೆ ಪ್ರೇರಣೆ ಯಾದ ಅಂಧ ಮಕ್ಕಳು,




