Belagavi NewsBelgaum NewsKannada NewsKarnataka News

*ಬಸವೇಶ್ವರ ವೃತ್ತದಲ್ಲಿರುವ ಉದ್ಯಾನವನ್ನು ಅಭಿವೃದ್ಧಿಪಡಿಸಲು ಆಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಗೋವಾವೇಸ್ ನಲ್ಲಿರುವ ಬಸವಣ್ಣನವರ ಉದ್ಯಾನವನದಲ್ಲಿ ಬೆಂಗಳೂರಿನಲ್ಲಿರುವ ಬಸವೇಶ್ವರ ವೃತ್ತದ ಮಾದರಿಯಲ್ಲಿ 50 ಅಡಿ ಮೂರ್ತಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮಾಡವ ಮೂಲಕ ಮನವಿ ಸಲ್ಲಿಸಲಾಯಿತು. 

ಇಂದು ನಗರದ ಜಿಲ್ಲಾಧಿಕಾರಿ ಆವರಣದಲ್ಲಿ ಪ್ರತಿಭಟಿಸಿ ವಿವಿಧ ಸಂಘಟನೆಗಳಿಂದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಗಳು ಆದಷ್ಟು ಬೇಗ ಸಮಸ್ಯೆಗೆ ಪರಿಹಾರ ನೀಡಲು ಪ್ರಾಮಾಣಿಕ  ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.‌

ಇದೆ ವೇಳೆ ಟಿಳಕವಾಡಿಯ ಓವರ್ ಬ್ರಿಡ್ಜ್ ಗೆ ಬಸವೇಶ್ವರ ಅವರ ಹೆಸರು ಇಡಬೇಕು ಹಾಗೂ ಬೆಳಗಾವಿ ರೈಲು ನಿಲ್ದಾಣದಲ್ಲಿ ಕೂಡಾ ಬಸವೇಶ್ವರ ಅವರ ಭಾವ ಚಿತ್ರ ಅಳವಡಿಸಿಬೇಕು ಎಂದು ಆಗ್ರಹಿಸಿದರು.‌

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button