Latest

*ಡೆಂಗ್ಯೂ ಜ್ವರಕ್ಕೆ ಬಲಿಯಾಯ್ತಾ ಕಂದಮ್ಮ?*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಐದು ತಿಂಗಳ ಮಗುವೊಂದು ಶಂಕಿತ ಡೆಂಗ್ಯೂ ಸೋಂಕಿಗೆ ಬಲಿಯಾಗಿರುವ ಘಟನೆ ನಡೆದಿದೆ.

ಧಾರವಾಡದಲ್ಲಿ ಈ ಘಟನೆ ನಡೆದಿದ್ದು, ನಗರದ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಗೋಪಾಲ ಲಮಾಣಿ ಎಂಬುವವರ ಮಗಳು ಆರಾಧ್ಯ ಜ್ವರದಿಂದ ಸಾವನ್ನಪ್ಪಿರುವ ಕಂದಮ್ಮ.
ಕೆಲ ದಿನಗಳಿಂದ ಮಗು ತೀವ್ರ ಜ್ವರದಿಂದ ಬಳಲುತ್ತಿತ್ತು. ಈ ಹಿನ್ನೆಲೆಯಲ್ಲಿ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈಗ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ. ಮಗು ಡೆಂಗ್ಯೂ ಸೋಂಕಿಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button