Kannada NewsKarnataka NewsNationalTravel

*ಹಳಿತಪ್ಪಿದ ಹೊವಾರಾ- ಸಿಎಸ್‌ಎಂಟಿ ಎಕ್ಸ್‌ಪ್ರೆಸ್ ರೈಲು* 

------WebKiLS����

ಪ್ರಗತಿವಾಹಿನಿ ಸುದ್ದಿ: ಹೊವಾರಾ- ಸಿಎಸ್‌ಎಂಟಿ ಎಕ್ಸ್‌ಪ್ರೆಸ್ ರೈಲು ಚಕ್ರಧರಪುರ ಬಳಿ ಇಂದು ಮುಂಜಾನೆ 3:45ರ ಸುಮಾರಿಗೆ ಹಳಿತಪ್ಪಿದೆ. ಈ ದುರಂತದಲ್ಲಿ 6 ಜನ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್‌ಖರ್ಸ್ವಾನ್ ವೆಸ್ಟ್ ಔಟರ್ ಮತ್ತು ಚಕ್ರಧರಪುರ ವಿಭಾಗದ ಬಾರಾಬಾಂಬೂ ನಡುವೆ ಈ ದುರಂತ ಸಂಭವಿಸಿದ್ದು ರೈಲ್ವೆ ವೈದ್ಯಕೀಯ ತಂಡದಿಂದ ಎಲ್ಲರಿಗೂ ಪ್ರಥಮ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಲಾಗಿದೆ.

ಎದುರುಗಡೆಯಿಂದ ಬರುತ್ತಿದ್ದ ಗೂಡ್ಸ್ ರೈಲು ಹಳಿತಪ್ಪಿದ್ದರಿಂದ ಎದುರಿನಿಂದ ಹಾದು ಹೋಗುತ್ತಿದ್ದ ಪ್ಯಾಸೆಂಜರ್ ರೈಲಿನ ಮೇಲೆ ಪರಿಣಾಮ ಬೀರಿದ್ದರಿಂದ ಈ ಘಟನೆ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಈ ಘಟನೆಯಲ್ಲಿ ಹಲವರು ಜೀವ ಕಳೆದುಕೊಂಡಿರುವ ಸಾಧ್ಯತೆಯಿದ್ದು, ಈ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಬರಬೇಕಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button