![](https://pragativahini.com/wp-content/uploads/2020/11/Crime.jpg)
ಬಂಗಾರ, ಬೆಳ್ಳಿ ಆಭರಣ, ನಗದು ಹಣ ಜಪ್ತಿ
ಪ್ರಗತಿವಾಹಿನಿ ಸುದ್ದಿ, ಮುಂಡಗೋಡ – ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಳೆದೆರಡು ವರ್ಷಗಳಿಂದ ರಾತ್ರಿ ವೇಳೆಯಲ್ಲಿ ಮನೆಯ ಜನರು ಮಲಗಿರುವಾಗಲೇ ಮನೆಯ ಹಿಂದಿನ ಬಾಗಿಲ ಚಿಲಕ ಮೀಟಿ ತೆಗೆದು ಮನೆಯ ಒಳಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
![](https://pragati.taskdun.com/wp-content/uploads/2020/11/Crime-crop-350x274.jpg)
ಈ ಘಟನೆಗೆ ಸಂಬಂಧಿಸಿದಂತೆ ಕಳೆದ ನ.೧೯ ರಂದು ಮುಂಡಗೋಡ ಠಾಣಾ ವ್ಯಾಪ್ತಿಯ ಮೈನಳ್ಳಿಯಲ್ಲಿ ಒಂದೇ ದಿನ ಎರಡು ಮನೆ ಕಳ್ಳತನವಾಗಿದ್ದು ಆರೋಪಿಯು ಕಳುವು ಮಾಡುವಾಗ ಮನೆಯ ಜನರು ಎಚ್ಚರವಾಗಿ ಅವನನ್ನು ಬೆನ್ನು ಹತ್ತಿ ಹಿಡಿಯಲು ಪ್ರಯತ್ನಿಸಿದರಾದರೂ ಆರೋಪಿಯು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದನು.
ತನಿಖೆ ನಡೆಸಿದ ಪೋಲಿಸರು ನ.೨೭ ರಂದು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿ ೨೦೧೮ ರಿಂದ ಇಲ್ಲಿಯವರಗೆ ಮುಂಡಗೋಡ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಳ್ಳತನ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದ.
ಇಂದು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ಅವನಿಂದ ಕಳವು ಮಾಡಿದ ಬಂಗಾರದ ಆಭರಣ, ನಹದು ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಶಿವಪ್ರಕಾಶ ದೇವರಾಜು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್. ಬದರಿನಾಥ, ಮತ್ತು ಶಿರಸಿ ಡಿ.ಎಸ್.ಪಿ. ಜಿ. ಟಿ. ನಾಯಕ ರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಚರಣೆಯಲ್ಲಿ ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಭುಗೌಡ. ಡಿ. ಕೆ, ಮಹಿಳಾ ಪಿ.ಎಸ್.ಐ. ಮೋಹಿನಿ ಶೆಟ್ಟಿ. ಪಿ.ಎಸ್.ಐ. ಬಸವರಾಜ ಮಬನುರ, ಎ.ಎಸ್.ಐ. ಅಶೋಕ ರಾಠೋಡ, ಎ.ಎಸ್.ಐ. ಖೀರಪ್ಪಾ ಘಟಕಾಂಬಳೆ, ಎ.ಎಸ್.ಐ. ಶೇಡಜಿ ಚವ್ಹಾಣ ಹಾಗೂ ಸಿಬ್ಬಂದಿಯವರಾದ ಧರ್ಮರಾಜ ನಾಯ್ಕ, ರಾಘವೇಂದ್ರ ನಾಯ್ಕ, ಭಗವಾನ ಗಾಂವಕರ, ವಿನೋದಕುಮಾರ, ಜಿ. ಬಿ. ಅರುಣ ಬಾಗೇವಾಡಿ, ಶರತ ದೇವಳಿ, ತಿರುಪತಿ ಚೌಡಣ್ಣವರ, ವಿವೇಕ ಪಟಗಾರ ಪಾಲ್ಗೊಂಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ