
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಪರಿಹಾರ ಧನ ಹೆಚ್ಚಳ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಈ ಮೊದಲು ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಈ ಮೊದಲು ತಲಾ ಹತ್ತು ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿತ್ತು.
ಇದರ ಜೊತೆಗೆ, ಆರ್ ಸಿಬಿ ಮತ್ತು ಕೆಎಸ್ ಸಿಎ ಸಹ ತಲಾ 10 ಲಕ್ಷ ರೂ ನೀಡುವುದಾಗಿ ಘೋಷಿಸಿವೆ.
ದುರ್ಘಟನೆಯಲ್ಲಿ ಒಟ್ಟೂ 11 ಜನರು ಮೃತಪಟ್ಟಿದ್ದಾರೆ.