Latest

*DFO ವೆಂಕಟೇಶ್ ಗೆ ಲೋಕಾಯುಕ್ತ ಶಾಕ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು, ರಾಮನಗರ, ಕೋಲಾರದಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಡಿಎಫ್ ಓ ವೆಂಕಟೇಶ್ ಅವರಿಗೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಕೊಲಾರ ಸಾಮಾಜಿಕ ಅರಣ್ಯ ಡಿಎಫ್ ಓ ವೆಂಕಟೇಶ್ ಅವರ ಬೆಂಗಳೂರಿನ ವಿಜಯನಗರ, ರಾಮನಗರದ ಫಾರ್ಮ್ ಹೌಸ್, ಕೋಲಾರ ಕ್ಲಾಕ್ ಟವರ್ ಬಳಿಯ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತ ಎಸ್ ಪಿ ಉಮೇಶ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ನಾಲ್ಕು ಡಿವೈಎಸ್ ಪಿಗಳು, 5 ಇನ್ಸ್ ಪೆಕ್ಟರ್ ಗಳು ಸೇರಿದಂತೆ 25ಕ್ಕೂ ಹೆಚ್ಚು ಸಿಬ್ಬಂದಿಗಳು ಒಟ್ಟು 8 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

*ಸಚಿವ ನಿರಾಣಿ ಒಡೆತನದ ಕಾರ್ಖಾನೆ ಬಾಯ್ಲರ್ ದುರಂತ; ಓರ್ವ ಸಾವು; ನಾಲ್ವರ ಸ್ಥಿತಿ ಗಂಭೀರ*

https://pragati.taskdun.com/suger-factoryboiler-blastone-death4-injuerdbagalakote/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button