
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಯೂಟ್ಯೂಬರ್ ಸೇರಿ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಯೂಟ್ಯೂಬರ್ ಸಮೀರ್, ಗಿರೀಶ್ ಮಟ್ಟೆಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ವರದಿಗಾರ ಹರೀಶ್ ಅವರ ದೂರಿನ ಮೇರೆಗೆ ಎಫ್ ಐ ಆರ್ ದಾಖಲಾಗಿದೆ. ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಯೂಟ್ಯೂಬರ್ ಗಳನ್ನು ಬೆನಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ವರದಿಗಾರ ಹಲ್ಲೆಗೊಳಗಾದವರನ್ನು ಮಾತನಾಡಿಸಲು ಹೋದಾಗ ಗಿರೀಶ್ ಮಟ್ಟೆಣ್ಣವ್ರ್ ಬೈಟ್ ಕೇಳುತ್ತಿದ್ದಂತೆ ಬೈಯ್ಯಲಾರಿಂಭಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಮಹೇಶ್ ಶೆಟ್ತಿ ಹಾಗೂ ಗ್ಯಾಂಗ್ ಹಲ್ಲೆ ನಡೆಸಿದೆ ಎಂದು ದೂರಲಾಗಿದೆ.