Kannada NewsKarnataka NewsLatest

*ಧರ್ಮಸ್ಥಳ ಪ್ರಕರಣ: ಬುರುಡೆ ಚಿನ್ನಯ್ಯಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಬುರುಡೆ ಚಿನ್ನಯ್ಯಗೆ ಕೋರ್ಟ್ ಶಾಕ್ ನೀಡಿದೆ. ಸದ್ಯಕ್ಕೆ ಚಿನ್ನಯ್ಯಗೆ ಜೈಲುವಾಸವೇ ಗತಿಯಾಗಿದೆ.

ಶಿವಮೊಗ್ಗ ಜೈಲು ಸೇರಿರುವ ಬುರುಡೆ ಚಿನ್ನಯ್ಯ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಜೆ ಎಂ ಎಫ್ ಸಿ ಕೋರ್ಟ್, ಚಿನ್ನಯ್ಯಗೆ ಜಾಮೀನು ನೀಡಲು ನಿರಾಕರಿಸಿದೆ.

Home add -Advt

ಧರ್ಮಸ್ಥಳದ ವಿವಿಧೆಡೆ ನೂನಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಬುರುಡೆ ಚಿನ್ನಯ್ಯ ಜೈಲು ಸೇರಿದ್ದು, ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದ. ಈ ವೇಳೆ ನ್ಯಾಯಾಲಯ, ಪ್ರಕರಣದ ಬಗ್ಗೆ ಎಸ್ ಐಟಿ ತನಿಖೆ ನಡೆಸುತ್ತಿರುವುದರಿಂದ ಜಾಮೀನು ನೀಡಲು ನಿರಾಕರಿಸಿದ್ದು, ಚಿನ್ನಯ್ಯ ಜಾಮೀನು ಅರ್ಜಿ ವಜಾಗೊಳಿಸಿದೆ.

Related Articles

Back to top button