Belagavi NewsBelgaum NewsKarnataka News

*ವಿಪತ್ತು ನಿರ್ವಹಣೆಗೆ ಅಣಕು ಪ್ರದರ್ಶನ: ಬಯೋ ಮಾಸ್ ಬಾಯ್ಲರ್ ಸ್ಫೋಟ: 24 ಕಾರ್ಮಿಕರ ರಕ್ಷಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿಪತ್ತು ಸಂದರ್ಭ ನಿರ್ವಹಣೆ ಕುರಿತು ರಕ್ಷಣಾತ್ಮಕ ಅಣಕು ಪ್ರದರ್ಶನ ಶುಕ್ರವಾರ (ಮೇ.5) ಆಟೋ ನಗರದ ಹಿಂಡಾಲ್ಕೂ ಕಾರ್ಖಾನೆಯಲ್ಲಿ ನಡೆಯಿತು.

ಫ್ಯಾಕ್ಟರಿಗಳಲ್ಲಿ ಬಯೋ ಮಾಸ್ ಬಾಯ್ಲರ್ ಬೆಂಕಿ ಅವಘಡ ಸಂಭವಿಸಿದಲ್ಲಿ ಅದನ್ನು ನಿಯಂತ್ರಣಕ್ಕೆ ತರಲು ಹಾಗೂ ಅದರಿಂದಾಗುವ ಪರಿಣಾಮಗಳನ್ನು ತಗ್ಗಿಸುವ ದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತಾಗಿ, ಪರಿಣಾಮಕಾರಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಈ ಅಣಕು ಪ್ರದರ್ಶನವನ್ನು ಕೈಗೊಳ್ಳಲಾಯಿತು.

ಬೆಳಗಾವಿ ತಹಶೀಲ್ದಾರ ಬಸವರಾಜ ನಾಗರಾಳ ಹಾಗೂ ಅಗ್ನಿ ಶಾಮಕ ದಳದ ಅಧೀಕ್ಷಕ ಶಶಿಧರ್ ನೀಲಗಾರ ಜಿಲ್ಲಾ ಕಾರ್ಖಾನೆಗಳ ಉಪ ನಿರ್ದೇಶಕ ವೆಂಕಟೇಶ ರಾಠೋಡ ಇವರ ಸಮ್ಮುಖದಲ್ಲಿ ಅಣಕು ಪ್ರದರ್ಶನ ಜರುಗಿತು.

ಅವಘಡ ಸಂಭವಿಸಿದ ಕುರಿತು ಮಾಹಿತಿ ಬಂದ ತಕ್ಷಣವೇ ಸಂಬಂಧಿಸಿದ ಎಲ್ಲಾ ಇಲಾಖೆಗಳು ಘಟನೆ ಸ್ಥಳಕ್ಕೆ ಭೇಟಿ ನೀಡಿ ಅವಘಡವನ್ನು ನಿಯಂತ್ರಿಸಲು ತುರ್ತು ಕ್ರಮ ಕೈಗೊಂಡರು.

Home add -Advt

ಸನ್ನಿವೇಶದಲ್ಲಿ ಅತೀ ಹೆಚ್ಚು ಗ್ಯಾಸ್ ಒತ್ತಡದ ಸಂದರ್ಭದಲ್ಲಿ ಬಯೋ ಮಾಸ್ ಬಾಯ್ಲರ್ ಬೆಂಕಿಯಿಂದಾಗಿ ಅವಘಡ ಸಂಭವಿಸಿತು. ಒಬ್ಬ ಕಾರ್ಮಿಕನ ಸಾವು ಸಂಭವಿಸಿದ್ದು, ಅವಗಡದಲ್ಲಿ ಗಾಯಗೊಂಡಿರುವ 24 ಕಾರ್ಮಿಕರನ್ನು ಆಂಬುಲೆನ್ಸ್ ಮೂಲಕ ಸ್ಥಳಾಂತರಿಸಿ, ಮೆಡಿಕಲ್ ಪೋಸ್ಟ್ ಗಳಲ್ಲಿ ಪ್ರಥಮ ಚಿಕಿತ್ಸೆ ನೀಡುವ ಸನ್ನಿವೇಶವನ್ನು ಅಣಕು ಪ್ರದರ್ಶನದಲ್ಲಿ ತೆಗೆದುಕೊಂಡ ವಿಪತ್ತು ನಿರ್ವಹಣೆ ಕಾರ್ಯವನ್ನು ಕೈಗೊಳ್ಳಲಾಯಿತು.

ಅದೇ ರೀತಿ ಹೆಚ್ಚು ಗಾಯಗೊಂಡಿರುವ 10 ಗಾಯಾಳುಗಳನ್ನು ಹಾಗೂ ಸಣ್ಣ ಪ್ರಮಾಣದಲ್ಲಿ ಗಾಯಗೊಂಡಿರುವ 5 ಜನ ಗಾಯಾಳುಗಳನ್ನು ರಕ್ಷಿಸಿ, ಆಂಬುಲೆನ್ಸ್‌ ಮೂಲಕ ವೈದ್ಯಕೀಯ ತುರ್ತು ಚಿಕಿತ್ಸೆ ಒದಗಿಸಲು ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಯಿತು.

ಎಸ್.ಡಿ.ಆರ್.ಎಫ್ ಅಧಿಕಾರಿ ಶರಣಬಸವ, ಜಿಲ್ಲಾ ಕುಟುಂಬ ಕಲ್ಯಾಣ್ ಅಧಿಕಾರಿ ಡಾ. ವಿಶ್ವನಾಥ್ ಭೋವಿ, ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ನಿಂಗನಗೌಡ ಚನಬಸನಗೌಡರ ಅಣಕು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು. ಹಿಂಡಾಲ್ಕೂ ಕಾರ್ಖಾನೆಯ 8 ಸಿಬ್ಬಂದಿಗಳು, 11 ಅಗ್ನಿಶಾಕದಳದ ಸಿಬ್ಬಂದಿಗಳು, 16 ಗೃಹರಕ್ಷಕ ದಳ, 20 ವೈದ್ಯಕೀಯ ಸಿಬ್ಬಂದಿ, ಅಣಕು ಪ್ರದರ್ಶನದಲ್ಲಿ ಭಾಗಿಯಾಗಿದ್ದರು.

Related Articles

Back to top button