Belagavi NewsBelgaum NewsElection NewsKannada NewsKarnataka NewsPolitics

*ಪಕ್ಷದ ವೇದಿಕೆಯಲ್ಲಿ ಚರ್ಚಿಸುವೆ: ಸತೀಶ್ ಜಾರಕಿಹೊಳಿ ಆರೋಪಕ್ಕೆ ಲಕ್ಷ್ಮಣ ಸವದಿ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಅವರು ಚುನಾವಣೆಯಲ್ಲಿ ಎಡವಿದ್ದಾರೆ. ಆ ಹಿನ್ನಲೆಯಲ್ಲಿ ಅಥಣಿಯಲ್ಲಿ ಕಾಂಗ್ರೆಸ್ ಗೆ ಮೈನಸ್ ಆಗಿದೆ. ಕಡಿಮೆ ಮತದಾನಕ್ಕೆ ಕೆಲ ದೋಷಗಳು ಕಾರಣವಾಗಿವೆ. ಇದನ್ನು ಬಹಿರಂಗವಾಗಿ ಚರ್ಚೆ ಮಾಡದೆ ಪಕ್ಷದ ವೇದಿಕೆಯಲ್ಲಿ ಚರ್ಚಿಸುವೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಜಾರಕಿಹೊಳಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

Home add -Advt

ಅಥಣಿಯಲ್ಲಿ ಬಿಜೆಪಿ ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ಲೀಡ್ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು, ನನ್ನ ಮೇಲೆ ಆರೋಪ ಮಾಡುವವರು ಮೊದಲು ಈ ಕ್ಷೇತ್ರದ ಪಾರಂಪರಿಕ ಮತಗಳ ಕುರಿತು ಅರಿಯಲಿ. ಚುನಾವಣೆಯಲ್ಲಿ ಅವರು ಎಡವಿದ್ದಕ್ಕೆ ಹಿನ್ನಡೆ ಉಂಟಾಗಿದ್ದು, ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡೆಸುವೆ. 2018 ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತೆ, ಆದರೆ 2019 ರ ಉಪ ಚುನಾವಣೆಯಲ್ಲಿ ಬಿಜೆಪಿ ಲೀಡ್ ಪಡೆಯಿತು. ಆಯಾ ಸಮಯದಲ್ಲಿ ಬದಲಾವಣೆ ಆಗುತ್ತವೆ ಎಂದರು.

ಆಯಾ ಕ್ಷೇತ್ರದಲ್ಲಿ ಪಾರಂಪರಿಕ ಮತಗಳು ಇರುತ್ತವೆ. ಪಕ್ಷ ಹಾಗೂ ವ್ಯಕ್ತಿಯ ಆಧಾರದ ಮೇಲೆ ಕೆಲವು ಸಲ ಮತದಾನ ಆಗುತ್ತದೆ. ಈ ಹಿನ್ನಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆ ನಂತರ ಈಗ ಏಳು ಸಾವಿರ ಮತ ಮೈನಸ್ ಆಗಲು ಕಾರಣ ಆಗಿದೆ ಎಂದು ಲಕ್ಷ್ಮಣ ಸವದಿ ಹೇಳಿದರು.

Related Articles

Back to top button