Kannada NewsKarnataka NewsLatest

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ವಿತರಣೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ಶಾಸಕ ಗಣೇಶ ಹುಕ್ಕೇರಿ ಗುರುವಾರ ಪರಿಹಾರದ ಚೆಕ್ ಗಳನ್ನು ವಿತರಿಸಿದರು.

ಕೇರೂರ ಗ್ರಾಮದ ರೈತರಾದ ಈಶ್ವರ ಮಾಂಗನೂರೆ ಮತ್ತು ಬಾಳು ಯಾದವ(ಕೇಸ್ತಿಗೋಳ) ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಶಾಸಕ ಗಣೇಶ ಹುಕ್ಕೇರಿ ಈ ರೈತರ ಕುಟುಂಬಗಳಿಗೆ ಪರಿಹಾರ ಮಂಜೂರು ಮಾಡಲು ಸರಕಾರಕ್ಕೆ ಶಿಫಾರಸ್ಸು ಮಾಡಿದ್ದರು.

Home add -Advt

ಅದರಂತೆ ಗುರುವಾರ ಮೃತರ ಮನೆಗೆ ತೆರಳಿದ ಶಾಸಕರು ಚೆಕ್ ಹಸ್ತಾಂತರಿಸಿದರಲ್ಲದೆ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಕುಟುಂಬಕ್ಕೆ ಧೈರ್ಯ ತುಂಬಿದ ಗಣೇಶ ಹುಕ್ಕೇರಿ, ಅವರ ಸಂಕಷ್ಟದಲ್ಲಿ ತಾವೂ ಭಾಗಿಯಾಗುವುದಾಗಿ ಭರವಸೆ ನೀಡಿದರು.

ಸ್ಥಳೀಯ ನಾಗರಿಕರು, ಕಾರ್ಯಕರ್ತರು, ಅಧಿಕಾರಿಗಳು, ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Related Articles

Back to top button