Belagavi NewsBelgaum News

*ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಕಲಚೇತನರಿಗೆ ದ್ವಿಚಕ್ರ ವಾಹನಗಳ ವಿತರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2023-24ನೇ ಸಾಲಿನ ಯಂತ್ರಚಾಲಿತ ದ್ವಿಚಕ್ರ ಯೋಜನೆಯಡಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೈಹಿಕ ವಿಕಲಚೇತನರಿಗೆ 20 ದ್ವಿಚಕ್ರ ವಾಹನಗಳನ್ನು ಗೋಕಾಕ ಗೃಹಕಚೇರಿಯಲ್ಲಿ ಮಂಗಳವಾರ (ಫೆ.25) ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ವಿತರಿಸಿದರು.

ಈ ವೇಳೆ ಮಾತನಾಡಿದ ಅವರು ವಾಹನಗಳನ್ನು ಬೇರೆಯವರಿಗೆ ಹಸ್ತಾಂತರಿಸದೇ ಅಥವಾ ವರ್ಗಾವಣೆ ಮಾಡದೇ ಸ್ವಂತಕ್ಕೆ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು. 

Related Articles

ಇದುವರೆಗೆ ಒಟ್ಟು 147 ವಾಹನಗಳು ಯಮಕನಮರಡಿ ಕ್ಷೇತ್ರದ ಫಲಾನುಭವಿಗಳಿಗೆ ವಿತರಿಸಲಾಗಿದ್ದು, ಇನ್ನೂ 35 ವಾಹನಗಳನ್ನು ಮಾರ್ಚ ಅಂತ್ಯದವರೆಗೆ ವಿತರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಯುವ ಮುಖಂಡರಾದ ಶ್ರೀ ರಾಹುಲ ಜಾರಕಿಹೊಳಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಮದೇವ್ ಬಿಲ್ಕರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Home add -Advt

Related Articles

Back to top button